ನವದೆಹಲಿ (ಪಿಟಿಐ) : ಭಾರತೀಯ ಮೂಲದ ಲೇಖಕಿ ಸುಷ್ಮಿತಾ ಬ್ಯಾನರ್ಜಿ ಅವರ ಹತ್ಯೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದ್ದು, ಹತ್ಯೆಯ ತನಿಖೆ ನಡೆಸುವಂತೆ ಅಫ್ಘಾನಿಸ್ತಾನ ಸರ್ಕಾರಕ್ಕೆ ಒತ್ತಾಯ ಪಡಿಸುವುದಾಗಿ ಸರ್ಕಾರ ತಿಳಿಸಿದೆ.
ಲೇಖಕಿ ಹತ್ಯೆಗೆ ರಾಜ್ಯಸಭೆಯಲ್ಲಿ ಶುಕ್ರವಾರ ಸದಸ್ಯರು ಸರ್ವಾನುಮತದ ಖಂಡನೆ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಕುನಾಲ್ ಕುಮಾರ್ ಘೋಷ್ ಅವರು ಲೇಖಕಿಯ ಹತ್ಯೆ ಕುರಿತಾಗಿ ವಿಷಯ ಪ್ರಸ್ತಾಪಿಸಿದರು.