ಈ ಮಸೂದೆ ಹೇಳುವಂತೆ ಯಾವುದೇ ವ್ಯಕ್ತಿ ದೂರು ಸಲ್ಲಿಸಬಹುದು ಮತ್ತು ನಾವು ಆ ಕುರಿತು ಹೇಳಿಕೆ ನೀಡಲು ವಿಚಾರಣೆ ನಡೆಸುವ ಪೊಲೀಸ್ ಅಧಿಕಾರಿಗಳ ಬಳಿಗೆ ಹೋಗಬೇಕಾಗುತ್ತದೆ. ಇದರಿಂದ ದೇಶದಲ್ಲಿ ಸಂದಿಗ್ಧ ವಾತಾವರಣ ನಿರ್ಮಾಣವಾಗಲಿದ್ದು, ಅಧಿಕಾರಿಗಳು ಯಾವುದೇ ಕೆಲಸ ಮಾಡಲು ಹಿಂಜರಿಯುವಂತಾಗುತ್ತದೆ ಎಂದು ಎಸ್ಪಿ ಮುಖಂಡ ರಾಮಗೋಪಾಲ್ ಯಾದವ್ ಅವರು ಮಸೂದೆ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.