ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಭೇಟಿ ಮಾಡಿದ ಬೆನ್ನಲ್ಲೇ, ಲೋಕಸಭೆಯ ಉಪಸಭಾಧ್ಯಕ್ಷ ಸ್ಥಾನದ ಚರ್ಚೆ ನಡೆದಿದೆ.
ಮೂಲಗಳ ಪ್ರಕಾರ, ಆಡಳಿತ ಪಕ್ಷ ಬಿಜೆಪಿ ಲೋಕಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಎಐಎಡಿಎಂಕೆಯ ಎಂ. ತಂಬಿದುರೈ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ. ಈ ನಡುವೆ, ತಂಬಿದುರೈ ಕೆಲವು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.
ಸಾಮಾನ್ಯವಾಗಿ ಈ ಹುದ್ದೆ ಪ್ರಮುಖ ವಿರೋಧ ಪಕ್ಷಕ್ಕೆ ಹೋಗುತ್ತದೆ.
ಬಿಜೆಪಿ ಲೋಕಸಭೆಯಲ್ಲಿ ಕಾಂಗ್ರೆಸ್ಸೇತರ ಪಕ್ಷ ಗಳ ಬಣ ರೂಪುಗೊಳ್ಳದಂತೆ ಪ್ರಯತ್ನಿ ಸುತ್ತಿದೆ ಎಂದು ಮೂಲಗಳು ತಿಳಿಸಿವೆ.