<p><strong>ಭೋಪಾಲ್ (ಪಿಟಿಐ):</strong> ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಡುವ ಭರವಸೆ ನೀಡಿದ್ದಾರೆ.<br /> ಪಕ್ಷದ ಅಭೂತಪೂರ್ವ ಗೆಲುವಿನ ಶ್ರೇಯವನ್ನು ಅವರು ಪಕ್ಷದ ಕಾರ್ಯಕರ್ತರಿಗೆ ಸಲ್ಲಿಸಿದ್ದಾರೆ.<br /> <br /> ಬಿಜೆಪಿಯು ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರಲು ಪಕ್ಷದ ಸಂಘಟನಾ ವ್ಯವಸ್ಥೆ ಹಾಗೂ ಕಾರ್ಯಕರ್ತರೇ ಕಾರಣ ಎಂದು ಹೇಳಿದ ಶಿವರಾಜ್ ಸಿಂಗ್ ಚೌಹಾಣ್, ‘ನನ್ನ ಸ್ಥಾನದಲ್ಲಿ ಬೇರೆ ಯಾರೇ ಇದ್ದರೂ, ಪಕ್ಷ ಗೆಲುವು ಸಾಧಿಸುತ್ತಿತ್ತು’ ಎಂದು ಹೇಳಿದ್ದಾರೆ.<br /> <br /> ‘ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಹೋರಾಡುವಾಗ, ಉಳಿದ ಎಲ್ಲ ರಾಜ್ಯಗಳಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಹೊಂದಿರುವ ಮಧ್ಯಪ್ರದೇಶದಿಂದ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ-ಕೊಡಬೇಕು. ಅದಕ್ಕಾಗಿ ನಾವು ಕಷ್ಟಪಡ-ಬೇಕು’ ಎಂದು ಚೌಹಾಣ್ ಹೇಳಿದರು.<br /> <br /> ‘ಅದನ್ನು ಸಾಧಿಸುವುಕ್ಕೆ ಅಗತ್ಯವಾದ ಎಲ್ಲಾ ಶ್ರಮಗಳನ್ನು ನಾವು ಹಾಕುತ್ತೇವೆ. ಬಿಜೆಪಿ ಆಡಳಿತದಲ್ಲಿರುವ ಎಲ್ಲಾ ರಾಜ್ಯಗಳ ಪರವಾಗಿ ನಾನು ಇದನ್ನು ಹೇಳುತ್ತಿದ್ದೇನೆ’ ಎಂದೂ ಅವರು ಹೇಳಿದರು.<br /> <br /> ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ರಾಜ್ಯದ ಉಸ್ತವರಿ ಹೊತ್ತಿದ್ದ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಚೌಹಾಣ್ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.<br /> <br /> <strong>ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ:</strong> ಕಾಂಗ್ರೆಸ್: ಜನಾದೇಶವನ್ನು ಒಪ್ಪಿಕೊಂಡಿರುವ ಕಾಂಗ್ರೆಸ್, ವಿಧಾನಸಭೆಯಲ್ಲಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದೆ.<br /> <br /> ರಾಜ್ಯದಲ್ಲಿ ಬಿಜೆಪಿಯು ಸತತ ಮೂರನೇ ಬಾರಿ ನಿಚ್ಚಳ ಬಹುಮತ ಪಡೆಯುವುದು ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕ ಅಜಯ್ ಸಿಂಗ್, ‘ಪ್ರಬಲ ಪ್ರತಿಪಕ್ಷವಾಗಿ ನಮ್ಮ ಪಾತ್ರವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದರು.<br /> ....<br /> <span style="font-size: 26px;">‘ಇದು ಬಿಜೆಪಿ. ಸಣ್ಣ ಕಾರ್ಯಕರ್ತರು ಕೂಡ ಇಲ್ಲಿ ದೊಡ್ಡ ಕೆಲಸ ಮಾಡುತ್ತಾರೆ. ಶಿವರಾಜ್ ಒಬ್ಬ ಸಾಮಾನ್ಯ ಕಾರ್ಯಕರ್ತ. ಚುನಾವಣೆ ಫಲಿತಾಂಶವು ಪಕ್ಷದ ಸಂಘಟನೆ ತೋರಿರುವ ಅದ್ಭುತ. ಶಿವರಾಜ್ನ ಸ್ಥಾನದಲ್ಲಿ ಬೇರೆಯಾರಿದ್ದರೂ ಬಿಜೆಪಿ ಗೆಲ್ಲುತಿತ್ತು. ಈ ಗೆಲುವು ರಾಜ್ಯದ ಜನರದ್ದು’</span></p>.<p><strong>–ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶ ಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್ (ಪಿಟಿಐ):</strong> ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಡುವ ಭರವಸೆ ನೀಡಿದ್ದಾರೆ.<br /> ಪಕ್ಷದ ಅಭೂತಪೂರ್ವ ಗೆಲುವಿನ ಶ್ರೇಯವನ್ನು ಅವರು ಪಕ್ಷದ ಕಾರ್ಯಕರ್ತರಿಗೆ ಸಲ್ಲಿಸಿದ್ದಾರೆ.<br /> <br /> ಬಿಜೆಪಿಯು ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರಲು ಪಕ್ಷದ ಸಂಘಟನಾ ವ್ಯವಸ್ಥೆ ಹಾಗೂ ಕಾರ್ಯಕರ್ತರೇ ಕಾರಣ ಎಂದು ಹೇಳಿದ ಶಿವರಾಜ್ ಸಿಂಗ್ ಚೌಹಾಣ್, ‘ನನ್ನ ಸ್ಥಾನದಲ್ಲಿ ಬೇರೆ ಯಾರೇ ಇದ್ದರೂ, ಪಕ್ಷ ಗೆಲುವು ಸಾಧಿಸುತ್ತಿತ್ತು’ ಎಂದು ಹೇಳಿದ್ದಾರೆ.<br /> <br /> ‘ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಹೋರಾಡುವಾಗ, ಉಳಿದ ಎಲ್ಲ ರಾಜ್ಯಗಳಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಹೊಂದಿರುವ ಮಧ್ಯಪ್ರದೇಶದಿಂದ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ-ಕೊಡಬೇಕು. ಅದಕ್ಕಾಗಿ ನಾವು ಕಷ್ಟಪಡ-ಬೇಕು’ ಎಂದು ಚೌಹಾಣ್ ಹೇಳಿದರು.<br /> <br /> ‘ಅದನ್ನು ಸಾಧಿಸುವುಕ್ಕೆ ಅಗತ್ಯವಾದ ಎಲ್ಲಾ ಶ್ರಮಗಳನ್ನು ನಾವು ಹಾಕುತ್ತೇವೆ. ಬಿಜೆಪಿ ಆಡಳಿತದಲ್ಲಿರುವ ಎಲ್ಲಾ ರಾಜ್ಯಗಳ ಪರವಾಗಿ ನಾನು ಇದನ್ನು ಹೇಳುತ್ತಿದ್ದೇನೆ’ ಎಂದೂ ಅವರು ಹೇಳಿದರು.<br /> <br /> ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ರಾಜ್ಯದ ಉಸ್ತವರಿ ಹೊತ್ತಿದ್ದ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಚೌಹಾಣ್ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.<br /> <br /> <strong>ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ:</strong> ಕಾಂಗ್ರೆಸ್: ಜನಾದೇಶವನ್ನು ಒಪ್ಪಿಕೊಂಡಿರುವ ಕಾಂಗ್ರೆಸ್, ವಿಧಾನಸಭೆಯಲ್ಲಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದೆ.<br /> <br /> ರಾಜ್ಯದಲ್ಲಿ ಬಿಜೆಪಿಯು ಸತತ ಮೂರನೇ ಬಾರಿ ನಿಚ್ಚಳ ಬಹುಮತ ಪಡೆಯುವುದು ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕ ಅಜಯ್ ಸಿಂಗ್, ‘ಪ್ರಬಲ ಪ್ರತಿಪಕ್ಷವಾಗಿ ನಮ್ಮ ಪಾತ್ರವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದರು.<br /> ....<br /> <span style="font-size: 26px;">‘ಇದು ಬಿಜೆಪಿ. ಸಣ್ಣ ಕಾರ್ಯಕರ್ತರು ಕೂಡ ಇಲ್ಲಿ ದೊಡ್ಡ ಕೆಲಸ ಮಾಡುತ್ತಾರೆ. ಶಿವರಾಜ್ ಒಬ್ಬ ಸಾಮಾನ್ಯ ಕಾರ್ಯಕರ್ತ. ಚುನಾವಣೆ ಫಲಿತಾಂಶವು ಪಕ್ಷದ ಸಂಘಟನೆ ತೋರಿರುವ ಅದ್ಭುತ. ಶಿವರಾಜ್ನ ಸ್ಥಾನದಲ್ಲಿ ಬೇರೆಯಾರಿದ್ದರೂ ಬಿಜೆಪಿ ಗೆಲ್ಲುತಿತ್ತು. ಈ ಗೆಲುವು ರಾಜ್ಯದ ಜನರದ್ದು’</span></p>.<p><strong>–ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶ ಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>