ವಾರಾಣಸಿ (ಉತ್ತರ ಪ್ರದೇಶ): ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ವಿನ್ಯಾಸಗಳಿಸಿ, ನಿರ್ಮಿಸಿರುವ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅನಾವರಣಗೊಳಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ (1906-1931). ಹಲವು ಅಪರಾಧಗಳಿಗಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಸ್ವಾತಂತ್ರ್ಯ ಹೋರಾಟಗಾರನ ಪುತ್ಥಳಿ ನಿರ್ಮಿಸಿರುವುದು ವಿಶೇಷ ಎನಿಸಿದೆ.
ಈ ಪ್ರತಿಮೆಯನ್ನು ವಾರಾಣಸಿಯ ಕೇಂದ್ರ ಕಾರಾಗೃಹದ ಆವರಣದಲ್ಲಿ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
CM Yogi Adiyanath unveils the statue of freedom fighter Chandra Shekhar Azad in Varanasi. The statue has been built by the inmates of Varanasi Central Jail. pic.twitter.com/HCzXNK7IJT