<p>ನವದೆಹಲಿ (ಪಿಟಿಐ): ಪಶ್ಚಿಮ ಬಂಗಾಳದ ವಿಜ್ಞಾನಿ ಪಾರ್ಥಸಾರಥಿ ರೇ ಮತ್ತು ಪ್ರಾಧ್ಯಾಪಕ ಅಂಬಿಕೇಶ್ ಮಹಾಪಾತ್ರಾ ಅವರ ಬಂಧನ ವಿರೋಧಿಸಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ದೇಶ ಮತ್ತು ವಿದೇಶಗಳ ವಿಜ್ಞಾನಿಗಳು, ಕೂಡಲೇ ಈ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ. <br /> <br /> ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವ್ಯಂಗ್ಯಚಿತ್ರವನ್ನು ಇ-ಮೇಲ್ನಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಪ್ರಾಧ್ಯಾಪಕ ಅಂಬಿಕೇಶ್ ಮಹಾಪಾತ್ರಾ ಮತ್ತು ಕೊಳೆಗೇರಿಗಳನ್ನು ಒಕ್ಕಲೆಬ್ಬಿಸುವ ಕ್ರಮದ ವಿರುದ್ಧ ಧ್ವನಿ ಎತ್ತಿದ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಜೀವ ವಿಜ್ಞಾನಿ ಪಾರ್ಥಸಾರಥಿ ಅವರನ್ನು ರಾಜ್ಯ ಸರ್ಕಾರ ಬಂಧಿಸಿದೆ.<br /> <br /> ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನೂರಾರು ವಿಜ್ಞಾನಿಗಳು, ಮಾನವ ಹಕ್ಕುಗಳ ದಮನವಾಗುತ್ತಿರುವ ಬಗ್ಗೆ ಕಳವಳಗೊಂಡಿದ್ದಾರೆ. ಇದು ಮಾನವ ಹಕ್ಕು ಮತ್ತು ಪ್ರಜಾಸತ್ತೆಯ ದಮನ ಎಂದು ಆರೋಪಿಸಿದ್ದಾರೆ. <br /> ಪ್ರಧಾನಿಗೆ ಬರೆದ ಪತ್ರಕ್ಕೆ ಅಮೆರಿಕದ ಪ್ರಾಧ್ಯಾಪಕ ನೋಮ್ ಚೋಮಸ್ಕಿ, ಎಸ್.ಎನ್.ಬೋಸ್, ಮೃಗಾಂಕ್ ಸುರ್, ಅಭಾ ಸುರ್, ಅರುಣಾ ರಾಯ್, ನಿಖಿಲ್ ದೇ ಸೇರಿದಂತೆ ಅಮೆರಿಕ, ಡೆನ್ಮಾರ್ಕ್, ಸಿಂಗಪುರ, ಸ್ವೀಡನ್ನ ಅನೇಕ ವಿಜ್ಞಾನಿಗಳು, ಪ್ರಾಧ್ಯಾಪಕರು ಸಹಿ ಹಾಕಿದ್ದಾರೆ. <br /> <br /> ರೇ ವಿರುದ್ಧ ಪೊಲೀಸರು ಹೊರಿಸಿರುವ ಸುಳ್ಳು ಆರೋಪಗಳನ್ನು ಕೈಬಿಡಬೇಕು. ಕೊಳೆಗೇರಿ ಒಕ್ಕಲೆಬ್ಬಿಸುವ ಘಟನೆ ಮತ್ತು ಈ ಸಂದರ್ಭದಲ್ಲಿ ನಡೆದ ಮಾನವ ಹಕ್ಕುಗಳ ದಮನದ ಬಗ್ಗೆ ತನಿಖೆ ನಡೆಯಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ. <br /> <br /> ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಹಕ್ಕು ಎಲ್ಲರಿಗೂ ಇದ್ದು, ಅದನ್ನು ಹತ್ತಿಕ್ಕುವ ಕಾರ್ಯ ಬಿಡಬೇಕು. ವಿವಿಧ ಕ್ಷೇತ್ರಗಳ ಗಣ್ಯರು ಇಂತಹ ಹೋರಾಟಗಳಿಗೆ ಧುಮುಕಿದಾಗ ಸರ್ಕಾರ ಅವರ ಧ್ವನಿಯನ್ನು ಅಡಗಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಮನವಿ ಮಾಡಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಪರಂಪರೆಯನ್ನು ಎತ್ತಿ ಹಿಡಿಯುವಂತೆ ವಿಜ್ಞಾನಿಗಳು ಕೋರಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪಶ್ಚಿಮ ಬಂಗಾಳದ ವಿಜ್ಞಾನಿ ಪಾರ್ಥಸಾರಥಿ ರೇ ಮತ್ತು ಪ್ರಾಧ್ಯಾಪಕ ಅಂಬಿಕೇಶ್ ಮಹಾಪಾತ್ರಾ ಅವರ ಬಂಧನ ವಿರೋಧಿಸಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ದೇಶ ಮತ್ತು ವಿದೇಶಗಳ ವಿಜ್ಞಾನಿಗಳು, ಕೂಡಲೇ ಈ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ. <br /> <br /> ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವ್ಯಂಗ್ಯಚಿತ್ರವನ್ನು ಇ-ಮೇಲ್ನಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಪ್ರಾಧ್ಯಾಪಕ ಅಂಬಿಕೇಶ್ ಮಹಾಪಾತ್ರಾ ಮತ್ತು ಕೊಳೆಗೇರಿಗಳನ್ನು ಒಕ್ಕಲೆಬ್ಬಿಸುವ ಕ್ರಮದ ವಿರುದ್ಧ ಧ್ವನಿ ಎತ್ತಿದ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಜೀವ ವಿಜ್ಞಾನಿ ಪಾರ್ಥಸಾರಥಿ ಅವರನ್ನು ರಾಜ್ಯ ಸರ್ಕಾರ ಬಂಧಿಸಿದೆ.<br /> <br /> ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನೂರಾರು ವಿಜ್ಞಾನಿಗಳು, ಮಾನವ ಹಕ್ಕುಗಳ ದಮನವಾಗುತ್ತಿರುವ ಬಗ್ಗೆ ಕಳವಳಗೊಂಡಿದ್ದಾರೆ. ಇದು ಮಾನವ ಹಕ್ಕು ಮತ್ತು ಪ್ರಜಾಸತ್ತೆಯ ದಮನ ಎಂದು ಆರೋಪಿಸಿದ್ದಾರೆ. <br /> ಪ್ರಧಾನಿಗೆ ಬರೆದ ಪತ್ರಕ್ಕೆ ಅಮೆರಿಕದ ಪ್ರಾಧ್ಯಾಪಕ ನೋಮ್ ಚೋಮಸ್ಕಿ, ಎಸ್.ಎನ್.ಬೋಸ್, ಮೃಗಾಂಕ್ ಸುರ್, ಅಭಾ ಸುರ್, ಅರುಣಾ ರಾಯ್, ನಿಖಿಲ್ ದೇ ಸೇರಿದಂತೆ ಅಮೆರಿಕ, ಡೆನ್ಮಾರ್ಕ್, ಸಿಂಗಪುರ, ಸ್ವೀಡನ್ನ ಅನೇಕ ವಿಜ್ಞಾನಿಗಳು, ಪ್ರಾಧ್ಯಾಪಕರು ಸಹಿ ಹಾಕಿದ್ದಾರೆ. <br /> <br /> ರೇ ವಿರುದ್ಧ ಪೊಲೀಸರು ಹೊರಿಸಿರುವ ಸುಳ್ಳು ಆರೋಪಗಳನ್ನು ಕೈಬಿಡಬೇಕು. ಕೊಳೆಗೇರಿ ಒಕ್ಕಲೆಬ್ಬಿಸುವ ಘಟನೆ ಮತ್ತು ಈ ಸಂದರ್ಭದಲ್ಲಿ ನಡೆದ ಮಾನವ ಹಕ್ಕುಗಳ ದಮನದ ಬಗ್ಗೆ ತನಿಖೆ ನಡೆಯಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ. <br /> <br /> ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಹಕ್ಕು ಎಲ್ಲರಿಗೂ ಇದ್ದು, ಅದನ್ನು ಹತ್ತಿಕ್ಕುವ ಕಾರ್ಯ ಬಿಡಬೇಕು. ವಿವಿಧ ಕ್ಷೇತ್ರಗಳ ಗಣ್ಯರು ಇಂತಹ ಹೋರಾಟಗಳಿಗೆ ಧುಮುಕಿದಾಗ ಸರ್ಕಾರ ಅವರ ಧ್ವನಿಯನ್ನು ಅಡಗಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಮನವಿ ಮಾಡಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಪರಂಪರೆಯನ್ನು ಎತ್ತಿ ಹಿಡಿಯುವಂತೆ ವಿಜ್ಞಾನಿಗಳು ಕೋರಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>