<p><strong>ನವದೆಹಲಿ (ಪಿಟಿಐ):</strong> ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಹಲ್ಲೆ ನಡೆಸಿದ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿವರ ಕೇಳಿ ವಿದೇಶಾಂಗ ಸಚಿವಾಲಯಕ್ಕೆ ನೋಟಿಸ್ ನೀಡಿದೆ.<br /> <br /> ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಆಯೋಗಕ್ಕೆ ದೂರು ನೀಡಿ, ಮಧ್ಯೆ ಪ್ರವೇಶಿಸುವಂತೆ ಕೋರಿದ್ದರು. <br /> <br /> ಮಾರ್ಚ್ 3ರಂದು ಪ್ರಕರಣದ ಪ್ರಥಮ ವಿಚಾರಣೆ ನಡೆದಾಗ, ಆಯೋಗವು ವಿದೇಶಾಂಗ ಕಾರ್ಯದರ್ಶಿಗೆ ಪತ್ರ ಬರೆದು ಎರಡು ವಾರಗಳ ಒಳಗೆ ವರದಿ ಸಲ್ಲಿಸಲು ತಿಳಿಸಿತ್ತು.<br /> <br /> ತಮಿಳುನಾಡಿನ ಮೀನುಗಾರರು ಕೆಲವೊಮ್ಮೆ ಜಲಸೀಮೆಯನ್ನು ಗುರುತಿಸದೆ ಶ್ರೀಲಂಕಾ ಗಡಿಯನ್ನು ಪ್ರವೇಶಿಸುತ್ತಾರೆ. ಇಂತಹ ಸಂದರ್ಭದಲ್ಲಿ ಹಲ್ಲೆ ಅಥವಾ ಗುಂಡಿನ ದಾಳಿಗೆ ಗುರಿಯಾಗುತ್ತಾರೆ ಎಂದು ಗಡ್ಕರಿ ದೂರಿನಲ್ಲಿ ತಿಳಿಸಿದ್ದರು.<br /> <br /> 2008ರಿಂದ ಈವರೆಗೆ ತಮಿಳುನಾಡಿನ 8 ಮೀನುಗಾರರು ಶ್ರೀಲಂಕಾ ಸೈನಿಕರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ಇಬ್ಬರು ಹತ್ಯೆಗೀಡಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಹಲ್ಲೆ ನಡೆಸಿದ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿವರ ಕೇಳಿ ವಿದೇಶಾಂಗ ಸಚಿವಾಲಯಕ್ಕೆ ನೋಟಿಸ್ ನೀಡಿದೆ.<br /> <br /> ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಆಯೋಗಕ್ಕೆ ದೂರು ನೀಡಿ, ಮಧ್ಯೆ ಪ್ರವೇಶಿಸುವಂತೆ ಕೋರಿದ್ದರು. <br /> <br /> ಮಾರ್ಚ್ 3ರಂದು ಪ್ರಕರಣದ ಪ್ರಥಮ ವಿಚಾರಣೆ ನಡೆದಾಗ, ಆಯೋಗವು ವಿದೇಶಾಂಗ ಕಾರ್ಯದರ್ಶಿಗೆ ಪತ್ರ ಬರೆದು ಎರಡು ವಾರಗಳ ಒಳಗೆ ವರದಿ ಸಲ್ಲಿಸಲು ತಿಳಿಸಿತ್ತು.<br /> <br /> ತಮಿಳುನಾಡಿನ ಮೀನುಗಾರರು ಕೆಲವೊಮ್ಮೆ ಜಲಸೀಮೆಯನ್ನು ಗುರುತಿಸದೆ ಶ್ರೀಲಂಕಾ ಗಡಿಯನ್ನು ಪ್ರವೇಶಿಸುತ್ತಾರೆ. ಇಂತಹ ಸಂದರ್ಭದಲ್ಲಿ ಹಲ್ಲೆ ಅಥವಾ ಗುಂಡಿನ ದಾಳಿಗೆ ಗುರಿಯಾಗುತ್ತಾರೆ ಎಂದು ಗಡ್ಕರಿ ದೂರಿನಲ್ಲಿ ತಿಳಿಸಿದ್ದರು.<br /> <br /> 2008ರಿಂದ ಈವರೆಗೆ ತಮಿಳುನಾಡಿನ 8 ಮೀನುಗಾರರು ಶ್ರೀಲಂಕಾ ಸೈನಿಕರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ಇಬ್ಬರು ಹತ್ಯೆಗೀಡಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>