ಎರಡೂ ಪ್ರಕರಣಗಳಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕೈವಾಡ ಇರುವುದಾಗಿ ಶಂಕೆ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ, ‘ತ್ರಿಲೋಚನ್ ಮಹತೊ ಕೊಲೆ ಮಾದರಿಯಲ್ಲಿಯೇ ಬಲರಾಮ್ಪುರದಲ್ಲಿಯೂ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಪುರುಲಿಯಾದಲ್ಲಿ ಹಿಡಿತ ಕಳೆದುಕೊಳ್ಳುತ್ತಿರುವ ಟಿಎಂಸಿ, ಬಿಜೆಪಿ ಕಾರ್ಯಕರ್ತರ ಹತ್ಯೆಗಾಗಿ ಈಗ ಮಾವೋವಾದಿಗಳ ಜೊತೆ ಕೈ ಜೋಡಿಸಿದೆ’ ಎಂದು ಆರೋಪಿಸಿದ್ದಾರೆ. ‘ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದೂ ಆಗ್ರಹಿಸಿದ್ದಾರೆ.