<p><strong>ನವದೆಹಲಿ (ಪಿಟಿಐ): </strong>ಬಹುದಿನಗಳ ಬೇಡಿಕೆಯಾದ ದೇವನಹಳ್ಳಿ ಬಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಹೆಸರು ನಾಮಕರಣ ಮಾಡುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವಾಲಯ ಪ್ರಸ್ತಾಪ ಸಲ್ಲಿಸಿರುವುದರಿಂದ ಬುಧವಾರ ಕೇಂದ್ರ ಸಂಪುಟ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.<br /> <br /> ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವ ವಿಷಯ ಬುಧವಾರ ಸಭೆ ಸೇರಲಿರುವ ಸಂಪುಟದ ಮುಂದೆ ಬರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಕೆಂಪೇಗೌಡ ಅವರ 503ನೇ ಜಯಂತಿ ಆಚರಣೆಯ ನಂತರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ `ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ಒತ್ತಡ ತರಲಾಗಿತ್ತು.<br /> <br /> ಮರುನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಕಳೆದ ವರ್ಷ ಸಲ್ಲಿಸಿದ ಪ್ರಸ್ತಾವವನ್ನು ವಿಮಾನಯಾನ ಸಚಿವಾಲಯ ಒಪ್ಪಿತ್ತು. ಈ ಸಂಬಂಧ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೂ ಒತ್ತಡ ಹೇರಿದ್ದರು. ಆದರೆ ಕೆಲ ಸಂಘಟನೆಗಳು ಈ ಸಂಬಂಧ ಅಪಸ್ವರ ಎತ್ತಿದ್ದು ದೇವನಹಳ್ಳಿಯಲ್ಲೇ ಜನಿಸಿದ ಟಿಪ್ಪು ಸುಲ್ತಾನ್, ಸಮಾನತೆಯ ಹರಿಕಾರ ಬಸವಣ್ಣ ಇಲ್ಲವೇ ಶ್ರೇಷ್ಠ ಎಂಜಿನಿಯರ್ ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬಹುದಿನಗಳ ಬೇಡಿಕೆಯಾದ ದೇವನಹಳ್ಳಿ ಬಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಹೆಸರು ನಾಮಕರಣ ಮಾಡುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವಾಲಯ ಪ್ರಸ್ತಾಪ ಸಲ್ಲಿಸಿರುವುದರಿಂದ ಬುಧವಾರ ಕೇಂದ್ರ ಸಂಪುಟ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.<br /> <br /> ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವ ವಿಷಯ ಬುಧವಾರ ಸಭೆ ಸೇರಲಿರುವ ಸಂಪುಟದ ಮುಂದೆ ಬರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಕೆಂಪೇಗೌಡ ಅವರ 503ನೇ ಜಯಂತಿ ಆಚರಣೆಯ ನಂತರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ `ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ಒತ್ತಡ ತರಲಾಗಿತ್ತು.<br /> <br /> ಮರುನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಕಳೆದ ವರ್ಷ ಸಲ್ಲಿಸಿದ ಪ್ರಸ್ತಾವವನ್ನು ವಿಮಾನಯಾನ ಸಚಿವಾಲಯ ಒಪ್ಪಿತ್ತು. ಈ ಸಂಬಂಧ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೂ ಒತ್ತಡ ಹೇರಿದ್ದರು. ಆದರೆ ಕೆಲ ಸಂಘಟನೆಗಳು ಈ ಸಂಬಂಧ ಅಪಸ್ವರ ಎತ್ತಿದ್ದು ದೇವನಹಳ್ಳಿಯಲ್ಲೇ ಜನಿಸಿದ ಟಿಪ್ಪು ಸುಲ್ತಾನ್, ಸಮಾನತೆಯ ಹರಿಕಾರ ಬಸವಣ್ಣ ಇಲ್ಲವೇ ಶ್ರೇಷ್ಠ ಎಂಜಿನಿಯರ್ ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>