ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಹಿಂದಿಗಿಂತ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ಯುವಕರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಜನರೂ ಇದರಲ್ಲಿ ಸೇರಿದ್ದಾರೆ. ಭಾರತದ ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸುತ್ತಿವೆ. ಇದು ಹತ್ಯೆ ಮತ್ತು ಗಂಭೀರ ಗಾಯಗಳಿಗೆ ಕಾರಣವಾಗುತ್ತಿದೆ. ಅಪಾಯಕಾರಿಯಾದ ಪೆಲೆಟ್ ಬಂದೂಕು ಬಳಸಲಾಗುತ್ತಿದೆ ಎಂದೂ ವರದಿ ಪ್ರತಿಪಾದಿಸಿದೆ.