ಬಜೆಟ್ ಅಧಿವೇಶನದ ಕೊನೆಯ ದಿನ ಸಂಸತ್ನ ಅಂಗಳಕ್ಕಿಳಿದು ವೈಎಸ್ಆರ್ ಸಂಸದರು ಪ್ರತಿಭಟನೆ ನಡೆಸಿದ್ದರು. ಇದಾದನಂತರ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಸಂಸದರಾದ ವರಪ್ರಸಾದ್ ರಾವ್, ವೈ.ವಿ. ಸುಬ್ಬ ರೆಡ್ಡಿ, ಪಿ.ವಿ ಮಿಥುನ್ ರೆಡ್ಡಿ, ವೈ.ಎಸ್. ಅವಿನಾಶ್ ರೆಡ್ಡಿ, ಮೆಕಪತಿ ರಾಜ್ಮೋಹನ್ ರೆಡ್ಡಿ ಮೊದಲಾದವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.