<p><strong>ಪಣಜಿ (ಐಎಎನ್ಎಸ್):</strong> `ವೋಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಿಜೆಪಿ ಮತ್ತು ಇತರ ಸಂಸತ್ ಸದಸ್ಯರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಬಿಜೆಪಿಯ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ಶುಕ್ರವಾರ ಹೇಳಿದ್ದಾರೆ.</p>.<p>ಗೋವಾದಲ್ಲಿ ಎಲ್.ಕೆ ಅಡ್ವಾಣಿ ಅವರ ರಥ ಯಾತ್ರೆಯು ಹಾದುಹೋಗಲಿರುವ ಹಿನ್ನೆಲೆಯಲ್ಲಿ ಸಿದ್ಧತೆಯ ಮೇಲ್ವಿಚಾರಣೆ ನೋಡಿಕೊಳ್ಳಲು ಪಣಜಿಯಲ್ಲಿರುವ ಬಿಜೆಪಿ ಮಾಜಿ ಅಧ್ಯಕ್ಷ ವೆಂಕಯ್ಯ ನಾಯ್ಡು, `ಈ ಹಗರಣದಿಂದ ಲಾಭ ಪಡೆದಿರುವವರನ್ನು ಗುರಿಯಾಗಿಸುವುದನ್ನು ಬಿಟ್ಟು, ಕೇಂದ್ರ ಸರ್ಕಾರವು ಆಡಳಿತ ಯಂತ್ರವನ್ನು ಬಳಸಿಕೊಂಡು ಹಗರಣವನ್ನು ಬಯಲು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ~ ಎಂದು ಕಿಡಿ ಕಾರಿದರು. <br /> `ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಯುಪಿಎ ಲಂಚ ಸಂಸದರಿಗೆ ಲಂಚ ನೀಡಿತ್ತು. ಈ ವಂಚನೆಯನ್ನು ಬಯಲಿಗೆಳೆದ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಹೇಳಿದರು.</p>.<p>`ದುಡ್ಡನ್ನು ಸಂಸತ್ಗೆ ತಂದು ಹಗರಣ ಬಯಲು ಮಾಡಿದ್ದಕ್ಕೆ ನಮ್ಮ ಸಂಸದರನ್ನು ಅಭಿನಂದಿಸಬೇಕಿತ್ತು. ಬದಲಿಗೆ ಅವರು ಸಂಸತ್ಗೆ ಕಳಂಕ ತಂದರು ಎನ್ನಲಾಯಿತು~ ಎಂದು ನಾಯ್ಡು ದೂರಿದರು.</p>.<p>ಈ ಪ್ರಕರಣದಲ್ಲಿ ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರವು ದೆಹಲಿ ಪೊಲೀಸರನ್ನು ತನಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ (ಐಎಎನ್ಎಸ್):</strong> `ವೋಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಿಜೆಪಿ ಮತ್ತು ಇತರ ಸಂಸತ್ ಸದಸ್ಯರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಬಿಜೆಪಿಯ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ಶುಕ್ರವಾರ ಹೇಳಿದ್ದಾರೆ.</p>.<p>ಗೋವಾದಲ್ಲಿ ಎಲ್.ಕೆ ಅಡ್ವಾಣಿ ಅವರ ರಥ ಯಾತ್ರೆಯು ಹಾದುಹೋಗಲಿರುವ ಹಿನ್ನೆಲೆಯಲ್ಲಿ ಸಿದ್ಧತೆಯ ಮೇಲ್ವಿಚಾರಣೆ ನೋಡಿಕೊಳ್ಳಲು ಪಣಜಿಯಲ್ಲಿರುವ ಬಿಜೆಪಿ ಮಾಜಿ ಅಧ್ಯಕ್ಷ ವೆಂಕಯ್ಯ ನಾಯ್ಡು, `ಈ ಹಗರಣದಿಂದ ಲಾಭ ಪಡೆದಿರುವವರನ್ನು ಗುರಿಯಾಗಿಸುವುದನ್ನು ಬಿಟ್ಟು, ಕೇಂದ್ರ ಸರ್ಕಾರವು ಆಡಳಿತ ಯಂತ್ರವನ್ನು ಬಳಸಿಕೊಂಡು ಹಗರಣವನ್ನು ಬಯಲು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ~ ಎಂದು ಕಿಡಿ ಕಾರಿದರು. <br /> `ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಯುಪಿಎ ಲಂಚ ಸಂಸದರಿಗೆ ಲಂಚ ನೀಡಿತ್ತು. ಈ ವಂಚನೆಯನ್ನು ಬಯಲಿಗೆಳೆದ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಹೇಳಿದರು.</p>.<p>`ದುಡ್ಡನ್ನು ಸಂಸತ್ಗೆ ತಂದು ಹಗರಣ ಬಯಲು ಮಾಡಿದ್ದಕ್ಕೆ ನಮ್ಮ ಸಂಸದರನ್ನು ಅಭಿನಂದಿಸಬೇಕಿತ್ತು. ಬದಲಿಗೆ ಅವರು ಸಂಸತ್ಗೆ ಕಳಂಕ ತಂದರು ಎನ್ನಲಾಯಿತು~ ಎಂದು ನಾಯ್ಡು ದೂರಿದರು.</p>.<p>ಈ ಪ್ರಕರಣದಲ್ಲಿ ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರವು ದೆಹಲಿ ಪೊಲೀಸರನ್ನು ತನಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>