<p><strong>ನಗರ (ಪಿಟಿಐ): </strong>ಶಿವ ದೇವಾಲಯವಿರುವ ಶಂಕರಾಚಾರ್ಯ ಬೆಟ್ಟದ ಹೆಸರು ಬದಲಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾನುವಾರ ಸ್ಪಷ್ಟಪಡಿಸಿದ್ದು ಈ ಕುರಿತು ಎದ್ದಿರುವ ವಿವಾದಕ್ಕೆ ಕೊನೆ ಹಾಡಿದ್ದಾರೆ.<br /> <br /> ‘ಶ್ರೀನಗರದಲ್ಲಿರುವ ಶಂಕರಾಚಾರ್ಯ ಬೆಟ್ಟದ ಹೆಸರು ಬದಲಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎನ್ನುವುದನ್ನು ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ‘ಯಾವುದೋ ಒಂದು ಗ್ರಹಿಕೆಯ ಮೇಲೆ ನಡೆಯುತ್ತಿರುವ ಈ ವಿವಾದದ ಕುರಿತ ಚರ್ಚೆಯಿಂದ ದೂರವಿರಲು ನಾನು ಬಯಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.<br /> <br /> ‘ಹೆಸರು ಬದಲಾವಣೆ ಮಾಡುವ ಬಗ್ಗೆ ಪ್ರಾಚ್ಯವಸ್ತು ಸರ್ವೇಕ್ಷಣಾಲಯದಿಂದ ಯಾವುದೇ ಪ್ರಸ್ತಾವ ಇಲ್ಲ ಎನ್ನುವುದನ್ನೂ ನಾನು ಖಚಿತಪಡಿಸಿಕೊಂಡಿದ್ದೇನೆ. ಆದರೂ ಈ ಕುರಿತು ಗಾಳಿ ಸುದ್ದಿ ಹರಡಿರುವುದರ ಬಗ್ಗೆ ನನಗೇನು ತಿಳಿಯದು’ ಎಂದೂ ಅವರು ಹೇಳಿದ್ದಾರೆ.<br /> <br /> <strong>‘ವಾಜಪೇಯಿ ಯುಗಾಂತ್ಯ’<br /> ಭೋಪಾಲ್ (ಪಿಟಿಐ): </strong>ಬಿಜೆಪಿಯಲ್ಲಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಅವರ ಯುಗ ಅಂತ್ಯಗೊಂಡಿದೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವ ವಾಜಪೇಯಿ ಸೋದರ ಸಂಬಂಧಿ ಕರುಣಾ ಶುಕ್ಲಾ ಭಾನುವಾರ ಹೇಳಿದ್ದಾರೆ.<br /> <br /> ‘ಬಿಜೆಪಿಯಲ್ಲಿ ನನ್ನನ್ನು ಸಂಪೂರ್ಣ ಕಡೆಗಣಿಸಲಾಗಿತ್ತು’ ಎಂದು ಮಾಜಿ ಸಂಸದೆ ಶುಕ್ಲಾ ಅಸಮಾಧಾನ ಹೊರಹಾಕಿದ್ದಾರೆ. ನರೇಂದ್ರ ಮೋದಿ, ರಾಜನಾಥ್ ಸಿಂಗ್ ಸೇರಿದಂತೆ ಇತರ ವ್ಯಕ್ತಿಗಳ ಗುಂಪು ಬಿಜೆಪಿಯನ್ನು ಮುನ್ನಡೆಸುತ್ತಿದೆ ಎಂದು ಅವರು ದೂರಿದ್ದಾರೆ.<br /> <br /> ‘ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದ ಪಕ್ಷದ ಛತ್ತೀಸ್ಗಡ ಬಿಜೆಪಿ ಘಟಕದಿಂದ ನಾನು ತೀವ್ರ ನೋವು ಅನುಭವಿಸಿದ್ದೇನೆ. ಪಕ್ಷ ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿತು’ ಎಂದು ಅವರು ಆಪಾದನೆ ಮಾಡಿದ್ದಾರೆ<br /> .<br /> <strong>ಉಗ್ರಾಣ ಕುಸಿತ: ಇಬ್ಬರ ಸಾವು<br /> ಮುಂಬೈ (ಐಎಎನ್ಎಸ್): </strong>ಭಾನುವಾರ ಬೆಳಿಗ್ಗೆ 5 ಗಂಟೆಗೆ ಎರಡು ಅಂತಸ್ತಿನ ಗೋದಾಮು ಕುಸಿದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. <br /> ಮತ್ತೊಬ್ಬರು ಗಾಯಗೊಂಡಿದ್ದು ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಅಂಧೇರಿಯ ಸಾಕಿ ನಾಕ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂವರು ಮಲಗಿರುವ ಸಂದರ್ಭದಲ್ಲಿ ಕಟ್ಟಡ ಕುಸಿದಿದ್ದು, ಮೃತರನ್ನು ಇಸ್ಮಾಯಿಲ್ ಅನ್ವರ್ (20), ಮತ್ತು ಅಮಿತ್ (25) ಎಂದು ಗುರುತಿಸಲಾಗಿದೆ.<br /> <br /> <strong>ಶೂಟೌಟ್ ಆರೋಪಿಗಳ ಬಂಧನ<br /> ಗುಡಗಾಂವ್ (ಐಎಎನ್ಎಸ್): </strong> ರೆವರಿ ಮತ್ತು ಮಹೇಂದ್ರಗಡ ನ್ಯಾಯಾಲಯದ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ಪಾತಕಿ ಮತ್ತು ಆತನ ಇಬ್ಬರು ಸಹಚರರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕುಲದೀಪ್ ಅಲಿಯಾಸ್ ಡಾಕ್ಟರ್ ಮತ್ತು ಈತನ ಸಹಚರರಾಗಿರುವ ಕಮಲ್ ಮತ್ತು ಚರಣ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ವಿವೇಕ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಗರ (ಪಿಟಿಐ): </strong>ಶಿವ ದೇವಾಲಯವಿರುವ ಶಂಕರಾಚಾರ್ಯ ಬೆಟ್ಟದ ಹೆಸರು ಬದಲಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾನುವಾರ ಸ್ಪಷ್ಟಪಡಿಸಿದ್ದು ಈ ಕುರಿತು ಎದ್ದಿರುವ ವಿವಾದಕ್ಕೆ ಕೊನೆ ಹಾಡಿದ್ದಾರೆ.<br /> <br /> ‘ಶ್ರೀನಗರದಲ್ಲಿರುವ ಶಂಕರಾಚಾರ್ಯ ಬೆಟ್ಟದ ಹೆಸರು ಬದಲಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎನ್ನುವುದನ್ನು ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ‘ಯಾವುದೋ ಒಂದು ಗ್ರಹಿಕೆಯ ಮೇಲೆ ನಡೆಯುತ್ತಿರುವ ಈ ವಿವಾದದ ಕುರಿತ ಚರ್ಚೆಯಿಂದ ದೂರವಿರಲು ನಾನು ಬಯಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.<br /> <br /> ‘ಹೆಸರು ಬದಲಾವಣೆ ಮಾಡುವ ಬಗ್ಗೆ ಪ್ರಾಚ್ಯವಸ್ತು ಸರ್ವೇಕ್ಷಣಾಲಯದಿಂದ ಯಾವುದೇ ಪ್ರಸ್ತಾವ ಇಲ್ಲ ಎನ್ನುವುದನ್ನೂ ನಾನು ಖಚಿತಪಡಿಸಿಕೊಂಡಿದ್ದೇನೆ. ಆದರೂ ಈ ಕುರಿತು ಗಾಳಿ ಸುದ್ದಿ ಹರಡಿರುವುದರ ಬಗ್ಗೆ ನನಗೇನು ತಿಳಿಯದು’ ಎಂದೂ ಅವರು ಹೇಳಿದ್ದಾರೆ.<br /> <br /> <strong>‘ವಾಜಪೇಯಿ ಯುಗಾಂತ್ಯ’<br /> ಭೋಪಾಲ್ (ಪಿಟಿಐ): </strong>ಬಿಜೆಪಿಯಲ್ಲಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಅವರ ಯುಗ ಅಂತ್ಯಗೊಂಡಿದೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವ ವಾಜಪೇಯಿ ಸೋದರ ಸಂಬಂಧಿ ಕರುಣಾ ಶುಕ್ಲಾ ಭಾನುವಾರ ಹೇಳಿದ್ದಾರೆ.<br /> <br /> ‘ಬಿಜೆಪಿಯಲ್ಲಿ ನನ್ನನ್ನು ಸಂಪೂರ್ಣ ಕಡೆಗಣಿಸಲಾಗಿತ್ತು’ ಎಂದು ಮಾಜಿ ಸಂಸದೆ ಶುಕ್ಲಾ ಅಸಮಾಧಾನ ಹೊರಹಾಕಿದ್ದಾರೆ. ನರೇಂದ್ರ ಮೋದಿ, ರಾಜನಾಥ್ ಸಿಂಗ್ ಸೇರಿದಂತೆ ಇತರ ವ್ಯಕ್ತಿಗಳ ಗುಂಪು ಬಿಜೆಪಿಯನ್ನು ಮುನ್ನಡೆಸುತ್ತಿದೆ ಎಂದು ಅವರು ದೂರಿದ್ದಾರೆ.<br /> <br /> ‘ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದ ಪಕ್ಷದ ಛತ್ತೀಸ್ಗಡ ಬಿಜೆಪಿ ಘಟಕದಿಂದ ನಾನು ತೀವ್ರ ನೋವು ಅನುಭವಿಸಿದ್ದೇನೆ. ಪಕ್ಷ ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿತು’ ಎಂದು ಅವರು ಆಪಾದನೆ ಮಾಡಿದ್ದಾರೆ<br /> .<br /> <strong>ಉಗ್ರಾಣ ಕುಸಿತ: ಇಬ್ಬರ ಸಾವು<br /> ಮುಂಬೈ (ಐಎಎನ್ಎಸ್): </strong>ಭಾನುವಾರ ಬೆಳಿಗ್ಗೆ 5 ಗಂಟೆಗೆ ಎರಡು ಅಂತಸ್ತಿನ ಗೋದಾಮು ಕುಸಿದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. <br /> ಮತ್ತೊಬ್ಬರು ಗಾಯಗೊಂಡಿದ್ದು ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಅಂಧೇರಿಯ ಸಾಕಿ ನಾಕ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂವರು ಮಲಗಿರುವ ಸಂದರ್ಭದಲ್ಲಿ ಕಟ್ಟಡ ಕುಸಿದಿದ್ದು, ಮೃತರನ್ನು ಇಸ್ಮಾಯಿಲ್ ಅನ್ವರ್ (20), ಮತ್ತು ಅಮಿತ್ (25) ಎಂದು ಗುರುತಿಸಲಾಗಿದೆ.<br /> <br /> <strong>ಶೂಟೌಟ್ ಆರೋಪಿಗಳ ಬಂಧನ<br /> ಗುಡಗಾಂವ್ (ಐಎಎನ್ಎಸ್): </strong> ರೆವರಿ ಮತ್ತು ಮಹೇಂದ್ರಗಡ ನ್ಯಾಯಾಲಯದ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ಪಾತಕಿ ಮತ್ತು ಆತನ ಇಬ್ಬರು ಸಹಚರರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕುಲದೀಪ್ ಅಲಿಯಾಸ್ ಡಾಕ್ಟರ್ ಮತ್ತು ಈತನ ಸಹಚರರಾಗಿರುವ ಕಮಲ್ ಮತ್ತು ಚರಣ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ವಿವೇಕ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>