ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಆರಂಭಗೊಂಡ ರೈತರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರೈತರನ್ನು ಸಮಾಧಾನಪಡಿಸಲು ಚೌಹಾಣ್ ಅವರು ಸತ್ಯಾಗ್ರಹದ ಮೊರೆ ಹೋಗಿದ್ದಾರೆ. ಉಪವಾಸ ಆರಂಭಕ್ಕೆ ಮುನ್ನ ಮಾತನಾಡಿದ ಚೌಹಾಣ್, ರೈತರ ಉತ್ಪನ್ನಕ್ಕೆ ಲಾಭದಾಯಕ ಬೆಲೆ ದೊರಕಿಸುವ ಭರವಸೆ ನೀಡಿದರು.