‘ನೀವು ಇಲಿಯ ಬಗ್ಗೆ ಮಾತನಾಡುತ್ತಿದ್ದೀರಿ. ಆದರೆ ಈ ಮಸೂದೆ ಸಿಂಹವನ್ನು ಕೂಡ ಬಲೆಗೆ ಕೆಡಹುವ ಶಕ್ತಿ ಹೊಂದಿದೆ’ ಎಂದು ಅವರು ಹೇಳಿದ್ದಾರೆ. ತಿದ್ದುಪಡಿ ನಂತರ ರಾಜ್ಯಸಭೆಯಲ್ಲಿ ಮಂಡನೆಯಾಗಿರುವ ಮಸೂದೆಯನ್ನು ಹಜಾರೆ ಶ್ಲಾಘಿಸಿದ್ದಾರೆ.
ಮಸೂದೆಯನ್ನು ಬೆಂಬಲಿಸುವಂತೆ, ಸಮಾಜವಾದಿ ಪಕ್ಷವವನ್ನು ಹಜಾರೆ ವಿನಂತಿಸಿಕೊಂಡಿದ್ದಾರೆ. ಜನ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ.