<p><strong>ಶ್ರೀನಗರ: </strong>ಭದ್ರತಾಪಡೆ ಸಿಬ್ಬಂದಿ ಇದ್ದ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ನ ಒಬ್ಬ ಯೋಧ ಸಾವಿಗೀಡಾಗಿದ್ದು, ಹತ್ತು ವರ್ಷದ ಬಾಲಕಿ ಹಾಗೂ ಇಬ್ಬರು ನಾಗರಿಕರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆ ದಾಳಿಯ ಹೊಣೆ ಹೊತ್ತಿದೆ.</p>.<p>ಸಿಆರ್ಪಿಎಫ್ನ ಕಾವಲುಪಡೆಯ ವಾಹನದ ಮೇಲೆ ನಡೆದ ಗುಂಡಿನ ದಾಳಿಯನ್ನು ತಾನು ನಡೆಸಿದ್ದಾಗಿ ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆ ಹೊಣೆ ಹೊತ್ತುಕೊಂಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.</p>.<p>ಕಾಶ್ಮೀರದಲ್ಲಿ ಭದ್ರತಾಪಡೆಗಳ ಮೇಲೆ ಲಷ್ಕರ್ ಉಗ್ರರು ದಾಳಿಯನ್ನು ತೀವ್ರಗೊಳಿಸುವುದಾಗಿ ಹೇಳಿರುವ ಲಷ್ಕರ್ನ ವಕ್ತಾರ ಅಬ್ದುಲ್ಲಾ ಗಜ್ನಾವಿ, ಈ ದಾಳಿ ನಡೆಸಿದ ಅಬು ಮೊಸಾ ಕೃತ್ಯವನ್ನು ಪ್ರಶಂಸಿಸಿದ್ದಾನೆ. ಜತೆಗೆ, ಆತನ್ನು ಸನ್ಮಾನಿಸುವುದಾಗಿ ಹೇಳಿ ಇಂಡಿಯಾ ಟುಡೆಗೆ ಮೇಲ್ ಕಳುಹಿಸಿದ್ದಾನೆ.</p>.<p>ಇಲ್ಲಿನ ಪಂಥಚೌಕದಲ್ಲಿ ಮಧ್ಯಾಹ್ನ 97 ಬೆಟಾಲಿಯನ್ನ ಸಿಆರ್ಪಿಎಫ್ ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಆರ್ಪಿಎಫ್ನ ಕಾನ್ಸ್ಟೆಬಲ್ ಬಸಪ್ಪ ಅವರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ವಾಗಿದೆ ಎಂದು ವರದಿಯಾಗಿದೆ.</p>.<p>ವಾಹನ ಚಾಲಕನೂ ಗಾಯಗೊಂಡಿದ್ದಾರೆ. ಸಿಆರ್ಪಿಎಫ್ನ ಯೋಧರು ಏ. 9ರಂದು ನಡೆಯುವ ಲೋಕಸಭೆ ಉಪ ಚುನಾವಣೆ ಕಾರ್ಯಕ್ಕೆ ಬಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಭದ್ರತಾಪಡೆ ಸಿಬ್ಬಂದಿ ಇದ್ದ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ನ ಒಬ್ಬ ಯೋಧ ಸಾವಿಗೀಡಾಗಿದ್ದು, ಹತ್ತು ವರ್ಷದ ಬಾಲಕಿ ಹಾಗೂ ಇಬ್ಬರು ನಾಗರಿಕರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆ ದಾಳಿಯ ಹೊಣೆ ಹೊತ್ತಿದೆ.</p>.<p>ಸಿಆರ್ಪಿಎಫ್ನ ಕಾವಲುಪಡೆಯ ವಾಹನದ ಮೇಲೆ ನಡೆದ ಗುಂಡಿನ ದಾಳಿಯನ್ನು ತಾನು ನಡೆಸಿದ್ದಾಗಿ ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆ ಹೊಣೆ ಹೊತ್ತುಕೊಂಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.</p>.<p>ಕಾಶ್ಮೀರದಲ್ಲಿ ಭದ್ರತಾಪಡೆಗಳ ಮೇಲೆ ಲಷ್ಕರ್ ಉಗ್ರರು ದಾಳಿಯನ್ನು ತೀವ್ರಗೊಳಿಸುವುದಾಗಿ ಹೇಳಿರುವ ಲಷ್ಕರ್ನ ವಕ್ತಾರ ಅಬ್ದುಲ್ಲಾ ಗಜ್ನಾವಿ, ಈ ದಾಳಿ ನಡೆಸಿದ ಅಬು ಮೊಸಾ ಕೃತ್ಯವನ್ನು ಪ್ರಶಂಸಿಸಿದ್ದಾನೆ. ಜತೆಗೆ, ಆತನ್ನು ಸನ್ಮಾನಿಸುವುದಾಗಿ ಹೇಳಿ ಇಂಡಿಯಾ ಟುಡೆಗೆ ಮೇಲ್ ಕಳುಹಿಸಿದ್ದಾನೆ.</p>.<p>ಇಲ್ಲಿನ ಪಂಥಚೌಕದಲ್ಲಿ ಮಧ್ಯಾಹ್ನ 97 ಬೆಟಾಲಿಯನ್ನ ಸಿಆರ್ಪಿಎಫ್ ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಆರ್ಪಿಎಫ್ನ ಕಾನ್ಸ್ಟೆಬಲ್ ಬಸಪ್ಪ ಅವರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ವಾಗಿದೆ ಎಂದು ವರದಿಯಾಗಿದೆ.</p>.<p>ವಾಹನ ಚಾಲಕನೂ ಗಾಯಗೊಂಡಿದ್ದಾರೆ. ಸಿಆರ್ಪಿಎಫ್ನ ಯೋಧರು ಏ. 9ರಂದು ನಡೆಯುವ ಲೋಕಸಭೆ ಉಪ ಚುನಾವಣೆ ಕಾರ್ಯಕ್ಕೆ ಬಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>