<p><strong>ಬಿಜ್ನೋರ್/ ನವದೆಹಲಿ (ಪಿಟಿಐ): </strong>ಮುಜಪ್ಫರ್ನಗರದಲ್ಲಿ ನಡೆದ ಕೋಮುಗಲಭೆಗಳಿಗೆ ಈ ಲೋಕಸಭಾ ಚುನಾವಣೆಯಲ್ಲಿ ಸೇಡು ತೀರಿಸಿಕೊಳ್ಳುವಂತೆ ಕರೆ ನೀಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್ಐಆರ್ ದಾಖಲಿಸಲಾಗಿದೆ.<br /> <br /> ಷಾ ಅವರ ಹೇಳಿಕೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ನಡೆಯುವ ಸಭೆಯಲ್ಲಿ ಚರ್ಚಿಸಲಿದೆ. ಷಾ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ 153ನೇ ಸೆಕ್ಷನ್ (ಜನರನ್ನು ಪ್ರಚೋದಿಸುವುದು) ಮತ್ತು ಜನಪ್ರತಿನಿಧಿ ಕಾಯಿದೆಯ 125ನೇ ಸೆಕ್ಷನ್ಗಳಡಿ (ಸಮುದಾಯಗಳ ಮಧ್ಯೆ ದ್ವೇಷ ಬಿತ್ತುವುದು) ದೂರು ದಾಖಲಿಸಲಾಗಿದೆ.<br /> <br /> ಕಾಂಗ್ರೆಸ್ ದೂರು:ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ಹೊತ್ತಿರುವ ಅಮಿತ್ ಷಾ ಅವರು ಜನಸಮುದಾಯಗಳ ಮಧ್ಯೆ ದ್ವೇಷ ಬಿತ್ತುವ ಹೇಳಿಕೆ ನೀಡುವ ಮೂಲಕ ಜನಪ್ರತಿನಿಧಿ ಕಾಯಿದೆಯ 125ನೇ ಸೆಕ್ಷನ್ ಅನ್ವಯ ಅಪರಾಧ ಎಸಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಶುಕ್ರವಾರ ದೂರು ನೀಡಿತ್ತು.<br /> <br /> ಕಳೆದ ವರ್ಷ ಕೋಮುಗಲಭೆಗಳಿಂದ ನಲುಗಿದ ಮುಜಪ್ಫರ್ನಗರದಲ್ಲಿ ಅಮಿತ್ ಷಾ ಗುರುವಾರ ಮಾಡಿದ ಭಾಷಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರು ಭಾಷಣದ ಸಿ.ಡಿ.ಯನ್ನು ಲಖನೌ ಚುನಾವಣಾ ಆಯೋಗ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದರು.<br /> <br /> ಆ ಪ್ರಕಾರ ಭಾಷಣದ ಸಿ.ಡಿ.ಯನ್ನು ಉತ್ತರ ಪ್ರದೇಶ ಚುನಾವಣಾಧಿಕಾರಿಗಳು ಆಯೋಗಕ್ಕೆ ಸಲ್ಲಿಸಿದ್ದರು. ಇದರ ಜತೆಗೆ ಜಿಲ್ಲಾ ಚುನಾವಣಾಧಿಕಾರಿಯ ವರದಿಯನ್ನೂ ಲಗತ್ತಿಸಿದ್ದರು. ನಂತರ ಷಾ ಅವರ ಹೇಳಿಕೆಯನ್ನು ದೆಹಲಿಯಲ್ಲಿರುವ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯಿರುವ ‘ನಿರ್ವಾಚನ ಸದನ್’ಗೆ ಕೂಡ ಕಳುಹಿಸಲಾಗಿತ್ತು.<br /> <br /> ‘ಮುಜಫ್ಫರ್ನಗರದಲ್ಲಿ ಕಳೆದ ವರ್ಷ ನಡೆದ ಕೋಮುಗಲಭೆಗಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಈಗ ನಡೆಯಲಿರುವ ಲೋಕಸಭಾ ಚುನಾವಣೆ ಒಂದು ಸದವಕಾಶ’ ಎಂದು ಅಮಿತ್ ಷಾ ಚುನಾವಣಾ ಭಾಷಣದಲ್ಲಿ ಹೇಳಿದ್ದರು.ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಿರುವ ಅಮಿತ್ ಷಾ ಅವರು ಉತ್ತರ ಪ್ರದೇಶ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಬಿಎಸ್ಪಿ ಗಳು ಒತ್ತಾಯಿಸಿದ್ದವು.</p>.<p><strong>ಧ್ರುವೀಕರಣದ ಸಂಚು: ಬಿಜೆಪಿ</strong><br /> ಅಮಿತ್ ಷಾ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಿಜ್ನೋರ್ ಜಿಲ್ಲಾಡಳಿತದ ಕ್ರಮವನ್ನು ಬಿಜೆಪಿ ಖಂಡಿಸಿದೆ.ಷಾ ಅವರ ವಿರುದ್ಧದ ಈ ಕ್ರಮದ ಹಿಂದೆ ಯಾವ ಸದುದ್ದೇಶವೂ ಇಲ್ಲ. ಉತ್ತರ ಪ್ರದೇಶದ ಚುನಾವಣಾ ಚಿತ್ರಣವನ್ನು ಧ್ರುವೀಕರಣಗೊಳಿಸುವ ಹಾಗೂ ಕೋಮುವಾದಗೊಳಿಸುವ ದುರುದ್ದೇಶ ಇದರ ಹಿಂದಿದೆ ಎಂದು ಆಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜ್ನೋರ್/ ನವದೆಹಲಿ (ಪಿಟಿಐ): </strong>ಮುಜಪ್ಫರ್ನಗರದಲ್ಲಿ ನಡೆದ ಕೋಮುಗಲಭೆಗಳಿಗೆ ಈ ಲೋಕಸಭಾ ಚುನಾವಣೆಯಲ್ಲಿ ಸೇಡು ತೀರಿಸಿಕೊಳ್ಳುವಂತೆ ಕರೆ ನೀಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್ಐಆರ್ ದಾಖಲಿಸಲಾಗಿದೆ.<br /> <br /> ಷಾ ಅವರ ಹೇಳಿಕೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ನಡೆಯುವ ಸಭೆಯಲ್ಲಿ ಚರ್ಚಿಸಲಿದೆ. ಷಾ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ 153ನೇ ಸೆಕ್ಷನ್ (ಜನರನ್ನು ಪ್ರಚೋದಿಸುವುದು) ಮತ್ತು ಜನಪ್ರತಿನಿಧಿ ಕಾಯಿದೆಯ 125ನೇ ಸೆಕ್ಷನ್ಗಳಡಿ (ಸಮುದಾಯಗಳ ಮಧ್ಯೆ ದ್ವೇಷ ಬಿತ್ತುವುದು) ದೂರು ದಾಖಲಿಸಲಾಗಿದೆ.<br /> <br /> ಕಾಂಗ್ರೆಸ್ ದೂರು:ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ಹೊತ್ತಿರುವ ಅಮಿತ್ ಷಾ ಅವರು ಜನಸಮುದಾಯಗಳ ಮಧ್ಯೆ ದ್ವೇಷ ಬಿತ್ತುವ ಹೇಳಿಕೆ ನೀಡುವ ಮೂಲಕ ಜನಪ್ರತಿನಿಧಿ ಕಾಯಿದೆಯ 125ನೇ ಸೆಕ್ಷನ್ ಅನ್ವಯ ಅಪರಾಧ ಎಸಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಶುಕ್ರವಾರ ದೂರು ನೀಡಿತ್ತು.<br /> <br /> ಕಳೆದ ವರ್ಷ ಕೋಮುಗಲಭೆಗಳಿಂದ ನಲುಗಿದ ಮುಜಪ್ಫರ್ನಗರದಲ್ಲಿ ಅಮಿತ್ ಷಾ ಗುರುವಾರ ಮಾಡಿದ ಭಾಷಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರು ಭಾಷಣದ ಸಿ.ಡಿ.ಯನ್ನು ಲಖನೌ ಚುನಾವಣಾ ಆಯೋಗ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದರು.<br /> <br /> ಆ ಪ್ರಕಾರ ಭಾಷಣದ ಸಿ.ಡಿ.ಯನ್ನು ಉತ್ತರ ಪ್ರದೇಶ ಚುನಾವಣಾಧಿಕಾರಿಗಳು ಆಯೋಗಕ್ಕೆ ಸಲ್ಲಿಸಿದ್ದರು. ಇದರ ಜತೆಗೆ ಜಿಲ್ಲಾ ಚುನಾವಣಾಧಿಕಾರಿಯ ವರದಿಯನ್ನೂ ಲಗತ್ತಿಸಿದ್ದರು. ನಂತರ ಷಾ ಅವರ ಹೇಳಿಕೆಯನ್ನು ದೆಹಲಿಯಲ್ಲಿರುವ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯಿರುವ ‘ನಿರ್ವಾಚನ ಸದನ್’ಗೆ ಕೂಡ ಕಳುಹಿಸಲಾಗಿತ್ತು.<br /> <br /> ‘ಮುಜಫ್ಫರ್ನಗರದಲ್ಲಿ ಕಳೆದ ವರ್ಷ ನಡೆದ ಕೋಮುಗಲಭೆಗಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಈಗ ನಡೆಯಲಿರುವ ಲೋಕಸಭಾ ಚುನಾವಣೆ ಒಂದು ಸದವಕಾಶ’ ಎಂದು ಅಮಿತ್ ಷಾ ಚುನಾವಣಾ ಭಾಷಣದಲ್ಲಿ ಹೇಳಿದ್ದರು.ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಿರುವ ಅಮಿತ್ ಷಾ ಅವರು ಉತ್ತರ ಪ್ರದೇಶ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಬಿಎಸ್ಪಿ ಗಳು ಒತ್ತಾಯಿಸಿದ್ದವು.</p>.<p><strong>ಧ್ರುವೀಕರಣದ ಸಂಚು: ಬಿಜೆಪಿ</strong><br /> ಅಮಿತ್ ಷಾ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಿಜ್ನೋರ್ ಜಿಲ್ಲಾಡಳಿತದ ಕ್ರಮವನ್ನು ಬಿಜೆಪಿ ಖಂಡಿಸಿದೆ.ಷಾ ಅವರ ವಿರುದ್ಧದ ಈ ಕ್ರಮದ ಹಿಂದೆ ಯಾವ ಸದುದ್ದೇಶವೂ ಇಲ್ಲ. ಉತ್ತರ ಪ್ರದೇಶದ ಚುನಾವಣಾ ಚಿತ್ರಣವನ್ನು ಧ್ರುವೀಕರಣಗೊಳಿಸುವ ಹಾಗೂ ಕೋಮುವಾದಗೊಳಿಸುವ ದುರುದ್ದೇಶ ಇದರ ಹಿಂದಿದೆ ಎಂದು ಆಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>