ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದನ ಅನರ್ಹತೆಗೆ ಸುಪ್ರೀಂ ತಡೆ

Last Updated 8 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿದ ಮಾತ್ರಕ್ಕೆ ಚುನಾವಣೆಯೊಂದನ್ನು ಅನೂರ್ಜಿತಗೊಳಿಸಲಾಗದು ಎಂದು ಬುಧವಾರ ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ತನ್ನ ಇಬ್ಬರು ಪತ್ನಿಯರು, ಮಕ್ಕಳು ಹಾಗೂ ಅವರ ಆಸ್ತಿಗಳನ್ನು ಪ್ರಕಟಿಸದೆ ಮರೆಮಾಚಿದ ಜೆಡಿಯು ಸಂಸದ ಮಂಗನಿಲಾಲ್ ಮಂಡಲ್ ಅವರನ್ನು ಅನರ್ಹಗೊಳಿಸಿದ ಪಟ್ನಾ ಹೈಕೋರ್ಟ್ ತೀರ್ಪನ್ನು ರದ್ದುಪಡಿಸಿದೆ.

ನ್ಯಾಯಮೂರ್ತಿಗಳಾದ ಆರ್.ಎಂ. ಲೋಧಾ ಮತ್ತು ಎಸ್.ಜೆ. ಮುಖೋಪಾಧ್ಯಾಯ ಅವರನ್ನೊಳಗೊಂಡ ನ್ಯಾಯಪೀಠವು, `ದೂರುದಾರರು ನಿರ್ದಿಷ್ಟವಾಗಿ ಚುನಾವಣಾ ಅರ್ಜಿಯಲ್ಲಿ ಅಭ್ಯರ್ಥಿಯು ಮಾಹಿತಿ ಮರೆಮಾಚಿದ್ದರಿಂದ ಚುನಾವಣಾ ಫಲಿತಾಂಶದ ಮೇಲೆ ದುಷ್ಪರಿಣಾಮ ಬೀರಿರುವುದಾಗಿ ದೂರದ ಹೊರತು ಚುನಾಯಿತ ಪ್ರತಿನಿಧಿಯನ್ನು ಅನರ್ಹಗೊಳಿಸಲಾಗದು~ ಎಂದು ಸ್ಪಷ್ಟಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT