ಪುದುಚೇರಿ (ಪಿಟಿಐ): ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರು ಸತತ 11 ಗಂಟೆ ಕಾಲ ಸಭೆ ನಡೆಸಿ ದಾಖಲೆ ನಿರ್ಮಿಸಿದ್ದಾರೆ.
ಸೋಮವಾರ ಅವರು ಪುದುಚೇರಿಯ 2016–17ನೆ ಸಾಲಿನ ಬಜೆಟ್ ಮಂಡಿಸಲಿದ್ದು, ಅದಕ್ಕೆ ಅಂತಿಮ ಸ್ವರೂಪ ನೀಡಲು ಪೂರ್ವಭಾವಿಯಾಗಿ ಶನಿವಾರ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದರು.
‘ಶನಿವಾರ ಸಂಜೆ 6 ಗಂಟೆಗೆ ಆರಂಭವಾದ ಸಭೆ ಭಾನುವಾರ ನಸುಕಿನ 4.30ಕ್ಕೆ ಮುಕ್ತಾಯವಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರ ಈ ವರೆಗೆ ಜಾರಿಮಾಡಿರುವ ವಿವಿಧ ಯೋಜನೆಗಳು, ಇನ್ನಷ್ಟು ಜನರಿಗೆ ಅನುಕೂಲವಾಗುವಂತೆ ಈ ಯೋಜನೆಗಳನ್ನು ವಿಸ್ತರಿಸುವುದೇ ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.