ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಉತ್ತಮ': ಬಿಜೆಪಿ ಶಾಸಕ

Last Updated 6 ಜೂನ್ 2018, 7:17 IST
ಅಕ್ಷರ ಗಾತ್ರ

ಉತ್ತರ ಪ್ರದೇಶ: 'ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ಅವರ ಹೊಡೆಯಿರಿ' ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್  ಹೇಳಿದ್ದಾರೆ.

ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಸಿಂಗ್, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ನಮ್ಮಿಂದ ಹಣ ಪಡೆದು ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರ ಕೆಲಸ ಪೂರ್ತಿಗೊಳಿಸುತ್ತಾರೆ ಎಂಬ ಯಾವ ನಿರೀಕ್ಷೆಯೂ ಇರಲ್ಲ ಎಂದಿದ್ದಾರೆ.

ಅಂದ ಹಾಗೆ ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ.  ಫೆಬ್ರುವರಿಯಲ್ಲಿ ರಾಟ್ಸಾದ್‌ನಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, ‘ಭಾರತ್‌ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ‌ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು.  ‘ಭಾರತ್‌ ಮಾತಾ ಕಿ ಜೈ’ ಎನ್ನದವರು ಪಾಕಿಸ್ತಾನಿಗಳು ಎಂದು ಹೇಳಿ ವಿವಾದಕ್ಕೀಡಾಗಿದಿದ್ದರು.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT