1998ರ ಅಕ್ಟೋಬರ್ನಲ್ಲಿ ರಾಜಸ್ಥಾನದ ಜೋಧಪುರ ಸಮೀಪದ ಹಳ್ಳಿಯಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ದೋಷಿ ಎಂದು ನ್ಯಾಯಾಲಯ ಹೇಳಿತ್ತು. ಅಲ್ಲದೆ, ವನ್ಯಮೃಗ ಸಂರಕ್ಷಣೆ ಕಾಯ್ದೆಯ 9/51ನೇ ಸೆಕ್ಷನ್ ಅಡಿಯಲ್ಲಿ ಐದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿತ್ತು. ಸದ್ಯ ಸಲ್ಮಾನ್ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿದೆ.