ನವದೆಹಲಿ: ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್ಎಸ್ಪಿಎ) ಹಿಂದಕ್ಕೆ ಪಡೆಯುವ ಅಥವಾ ಅದಕ್ಕೆ ತಿದ್ದುಪಡಿ ತರುವ ಯಾವುದೇ ಚಿಂತನೆ ಇಲ್ಲ ಎಂದು ಕೇಂದ್ರ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಹೇಳಿದ್ದಾರೆ.
‘ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಕಾಯ್ದೆಯನ್ನು ಮಾನವೀಯ ದೃಷ್ಟಿಕೋನದಿಂದ ನೋಡುವ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡುವ ಸಂಬಂಧ ಪ್ರಸ್ತಾವವೊಂದು ಸರ್ಕಾರದ ಮುಂದಿದೆ’ ಎಂದು ವಿವರಿಸಿದ್ದಾರೆ.
ಅನುಮಾನಾಸ್ಪದ ವ್ಯಕ್ತಿಗಳನ್ನು ವಾರಂಟ್ ಇಲ್ಲದೆ ಬಂಧಿಸಲು ಅಥವಾ ಹತ್ಯೆ ಮಾಡುವಂತಹ ಹೆಚ್ಚಿನ ಹಾಗೂ ಅನಿಯಂತ್ರಿತ ಅಧಿಕಾರ ಈ ಕಾಯಿದೆಯಡಿ ಭದ್ರತಾ ಪಡೆಗಳಿಗೆ ಪ್ರಾಪ್ತವಾಗುತ್ತದೆ.