<p><strong>ಡೆಹ್ರಾಡೂನ್ /ಶಿಮ್ಲಾ (ಪಿಟಿಐ): </strong>ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರವಾಹ ಸ್ಥಿತಿ ಉಂಟು ಮಾಡಿರುವ ಮಹಾಮಳೆಯ ಭಯ ಮುಂದುವರಿದ್ದು, ಉತ್ತರಾಖಂಡನ 90 ಧರ್ಮಶಾಲೆಗಳಲ್ಲಿ ರಕ್ಷಣೆ ಪಡೆದಿದ್ದ ಸಾವಿರಾರು ಭಕ್ತರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೇದಾರನಾಥದಲ್ಲಿ ತೊಂದರೆಗೆ ಸಿಲುಕಿರುವವರ ರಕ್ಷಣಾ ಕಾರ್ಯ ಗುರುವಾರ ಭರದಿಂದ ಸಾಗಿದೆ.<br /> <br /> ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿರುವ ತನ್ನ ವರದಿಯಲ್ಲಿ 90 ಧರ್ಮಶಾಲೆಗಳಲ್ಲಿ ಆಶ್ರಯಪಡೆದಿದ್ದ ಸಾವಿರಾರು ಜನರು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇವರೆಗೆ ಸಾವಿನ ಸಂಖ್ಯೆ 150ಕ್ಕೆ ತಲುಪಿದೆ ಎಂದು ತಿಳಿಸಿದೆ.<br /> <br /> ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ವಾತಾವರಣ ತಿಳಿಗೊಳ್ಳುತ್ತಿದ್ದು, ಈ ಎರಡು ಕಡೆಗಳಲ್ಲಿ ಸೇನಾಪಡೆಯ ಎರಡು ಹಾಗೂ ರಾಜ್ಯ ಸರ್ಕಾರದ ಒಂದು ಹೆಲಿಕಾಪ್ಟರ್ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು, ಇವರೆಗೆ 600 ಜನ ಪ್ರವಾಸಿಗರನ್ನು ರಕ್ಷಿಸಲಾಗಿದೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ 12 ಹೆಲಿಕಾಪ್ಟರ್ಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದ್ದು, ಇದರ ಹೊರತಾಗಿಯೂ ಕಾರ್ಯಾಚರಣೆ ಚುರುಕುಗೊಳಿಸಲು ಮತ್ತೆ 8 ಹೆಲಿಕಾಪ್ಟರ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.<br /> <br /> ರಕ್ಷಣಾ ಕಾರ್ಯಾಚರಣೆಗಾಗಿ ಡೆಹ್ರಾಡೂನ್ನಿಂದ ಎರಡು ಹೆಲಿಕಾಪ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದು, ಭಕ್ತರ ರಕ್ಷಣೆಗಾಗಿ ಸೇನೆಯು ತನ್ನ ಪಡೆಗಳನ್ನು ನಿಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್ /ಶಿಮ್ಲಾ (ಪಿಟಿಐ): </strong>ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರವಾಹ ಸ್ಥಿತಿ ಉಂಟು ಮಾಡಿರುವ ಮಹಾಮಳೆಯ ಭಯ ಮುಂದುವರಿದ್ದು, ಉತ್ತರಾಖಂಡನ 90 ಧರ್ಮಶಾಲೆಗಳಲ್ಲಿ ರಕ್ಷಣೆ ಪಡೆದಿದ್ದ ಸಾವಿರಾರು ಭಕ್ತರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೇದಾರನಾಥದಲ್ಲಿ ತೊಂದರೆಗೆ ಸಿಲುಕಿರುವವರ ರಕ್ಷಣಾ ಕಾರ್ಯ ಗುರುವಾರ ಭರದಿಂದ ಸಾಗಿದೆ.<br /> <br /> ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿರುವ ತನ್ನ ವರದಿಯಲ್ಲಿ 90 ಧರ್ಮಶಾಲೆಗಳಲ್ಲಿ ಆಶ್ರಯಪಡೆದಿದ್ದ ಸಾವಿರಾರು ಜನರು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇವರೆಗೆ ಸಾವಿನ ಸಂಖ್ಯೆ 150ಕ್ಕೆ ತಲುಪಿದೆ ಎಂದು ತಿಳಿಸಿದೆ.<br /> <br /> ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ವಾತಾವರಣ ತಿಳಿಗೊಳ್ಳುತ್ತಿದ್ದು, ಈ ಎರಡು ಕಡೆಗಳಲ್ಲಿ ಸೇನಾಪಡೆಯ ಎರಡು ಹಾಗೂ ರಾಜ್ಯ ಸರ್ಕಾರದ ಒಂದು ಹೆಲಿಕಾಪ್ಟರ್ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು, ಇವರೆಗೆ 600 ಜನ ಪ್ರವಾಸಿಗರನ್ನು ರಕ್ಷಿಸಲಾಗಿದೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ 12 ಹೆಲಿಕಾಪ್ಟರ್ಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದ್ದು, ಇದರ ಹೊರತಾಗಿಯೂ ಕಾರ್ಯಾಚರಣೆ ಚುರುಕುಗೊಳಿಸಲು ಮತ್ತೆ 8 ಹೆಲಿಕಾಪ್ಟರ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.<br /> <br /> ರಕ್ಷಣಾ ಕಾರ್ಯಾಚರಣೆಗಾಗಿ ಡೆಹ್ರಾಡೂನ್ನಿಂದ ಎರಡು ಹೆಲಿಕಾಪ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದು, ಭಕ್ತರ ರಕ್ಷಣೆಗಾಗಿ ಸೇನೆಯು ತನ್ನ ಪಡೆಗಳನ್ನು ನಿಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>