<p><strong>ಹೈದರಾಬಾದ್ (ಐಎಎನ್ಎಸ್):</strong> ಪ್ರತ್ಯೇಕ ತೆಲಂಗಾಣ ರಾಜ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಸ್ಥಗಿತಗೊಂಡಿದ್ದ ರಾಜ್ಯದ ಸಿಂಗರೇಣಿ ಕಲ್ಲಿದ್ದಲು ಉತ್ಪಾದನೆ ಮಂಗಳವಾರ ಪುನರಾರಂಭವಾಗಿದೆ. <br /> <br /> ಇದಲ್ಲದೆ ಪ್ರತ್ಯೇಕ ತೆಲಂಗಾಣ ಹೋರಾಟಕ್ಕೆ ಬೆಂಬಲ ಸೂಚಿಸಿ ಬಂದ್ ಆಚರಿಸಿದ್ದ ಶಾಲಾ ಕಾಲೇಜುಗಳು ಕೂಡ ಎಂದಿನಂತೆ ಪುನರಾರಂಭವಾಗಿವೆ. <br /> <br /> ಕಲ್ಲಿದ್ದಲು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದ, ಕಲ್ಲಿದ್ದಲು ಉತ್ಪಾದನಾ ಘಟಕ ಸಂಘಟನೆಗಳು ತಾತ್ಕಾಲಿಕವಾಗಿ ಮುಷ್ಕರ ನಿಲ್ಲಿಸುವಂತೆ ಸೋಮವಾರ ತಡರಾತ್ರಿ ತೆಗೆದುಕೊಂಡ ನಿರ್ಣಯದ ಹಿನ್ನೆಲೆಯಲ್ಲಿ ತೆಲಂಗಾಣ ಪ್ರಾಂತದಲ್ಲಿನ ನಾಲ್ಕು ಜಿಲ್ಲೆಯ 50 ಕಲ್ಲಿದ್ದಲು ಉತ್ಪಾದನಾ ಗಣಿಗಳ ಕಾರ್ಮಿಕರು ಕೆಲಸಕ್ಕೆ ಮರಳಿದರು.<br /> <br /> ಸಂಘಟನೆಗಳ ಪರವಾಗಿ ಗಣಿ ಕಂಪೆನಿಯ ಆಡಳಿತ ಮಂಡಳಿಯೊಂದಿಗೆ ತೆಲಂಗಾಣ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಸಂಚಾಲಕ ಎಂ.ಕೊದಂಡರಾಮ್ ಅವರು ಚರ್ಚೆ ನಡೆಸಿದ ಬಳಿಕ ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಮರಳುವಂತೆ ಕಾರ್ಮಿಕರಿಗೆ ಕರೆ ನೀಡಿದರು. <br /> <br /> ಇದರೊಂದಿಗೆ ಮುಷ್ಕರದ ಅವಧಿಯನ್ನು ವಿಶೇಷ ರಜೆ ಎಂದು ಪರಿಗಣಿಸಲು ಹಾಗೂ ಹಬ್ಬದ ಮುಂಗಡ ಹಣ ನೀಡಲು ಮತ್ತು ಮುಷ್ಕರ ನಿರತ ಕಾರ್ಮಿಕರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಆಡಳಿತ ಮಂಡಳಿ ಒಪ್ಪಿಕೊಂಡಿದೆ.<br /> <br /> 35 ದಿನಗಳ ನಂತರ ಕಲ್ಲಿದ್ದಲು ಉತ್ಪಾದನಾ ಘಟಕಗಳ ಪುನರಾರಂಭದಿಂದ ತೀವ್ರ ವಿದ್ಯುತ್ ಕೊರತೆಯನ್ನು ಅನುಭವಿಸುತ್ತಿದ್ದ ಕರ್ನಾಟಕ, ಆಂಧ್ರಪದೇಶ, ಮಹಾರಾಷ್ಟ್ರ ಸೇರಿದಂತೆ ಆರು ರಾಜ್ಯಗಳು ಸ್ವಲ್ಪ ಮಟ್ಟಿಗೆ ನಿರಾಳವಾಗುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್):</strong> ಪ್ರತ್ಯೇಕ ತೆಲಂಗಾಣ ರಾಜ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಸ್ಥಗಿತಗೊಂಡಿದ್ದ ರಾಜ್ಯದ ಸಿಂಗರೇಣಿ ಕಲ್ಲಿದ್ದಲು ಉತ್ಪಾದನೆ ಮಂಗಳವಾರ ಪುನರಾರಂಭವಾಗಿದೆ. <br /> <br /> ಇದಲ್ಲದೆ ಪ್ರತ್ಯೇಕ ತೆಲಂಗಾಣ ಹೋರಾಟಕ್ಕೆ ಬೆಂಬಲ ಸೂಚಿಸಿ ಬಂದ್ ಆಚರಿಸಿದ್ದ ಶಾಲಾ ಕಾಲೇಜುಗಳು ಕೂಡ ಎಂದಿನಂತೆ ಪುನರಾರಂಭವಾಗಿವೆ. <br /> <br /> ಕಲ್ಲಿದ್ದಲು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದ, ಕಲ್ಲಿದ್ದಲು ಉತ್ಪಾದನಾ ಘಟಕ ಸಂಘಟನೆಗಳು ತಾತ್ಕಾಲಿಕವಾಗಿ ಮುಷ್ಕರ ನಿಲ್ಲಿಸುವಂತೆ ಸೋಮವಾರ ತಡರಾತ್ರಿ ತೆಗೆದುಕೊಂಡ ನಿರ್ಣಯದ ಹಿನ್ನೆಲೆಯಲ್ಲಿ ತೆಲಂಗಾಣ ಪ್ರಾಂತದಲ್ಲಿನ ನಾಲ್ಕು ಜಿಲ್ಲೆಯ 50 ಕಲ್ಲಿದ್ದಲು ಉತ್ಪಾದನಾ ಗಣಿಗಳ ಕಾರ್ಮಿಕರು ಕೆಲಸಕ್ಕೆ ಮರಳಿದರು.<br /> <br /> ಸಂಘಟನೆಗಳ ಪರವಾಗಿ ಗಣಿ ಕಂಪೆನಿಯ ಆಡಳಿತ ಮಂಡಳಿಯೊಂದಿಗೆ ತೆಲಂಗಾಣ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಸಂಚಾಲಕ ಎಂ.ಕೊದಂಡರಾಮ್ ಅವರು ಚರ್ಚೆ ನಡೆಸಿದ ಬಳಿಕ ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಮರಳುವಂತೆ ಕಾರ್ಮಿಕರಿಗೆ ಕರೆ ನೀಡಿದರು. <br /> <br /> ಇದರೊಂದಿಗೆ ಮುಷ್ಕರದ ಅವಧಿಯನ್ನು ವಿಶೇಷ ರಜೆ ಎಂದು ಪರಿಗಣಿಸಲು ಹಾಗೂ ಹಬ್ಬದ ಮುಂಗಡ ಹಣ ನೀಡಲು ಮತ್ತು ಮುಷ್ಕರ ನಿರತ ಕಾರ್ಮಿಕರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಆಡಳಿತ ಮಂಡಳಿ ಒಪ್ಪಿಕೊಂಡಿದೆ.<br /> <br /> 35 ದಿನಗಳ ನಂತರ ಕಲ್ಲಿದ್ದಲು ಉತ್ಪಾದನಾ ಘಟಕಗಳ ಪುನರಾರಂಭದಿಂದ ತೀವ್ರ ವಿದ್ಯುತ್ ಕೊರತೆಯನ್ನು ಅನುಭವಿಸುತ್ತಿದ್ದ ಕರ್ನಾಟಕ, ಆಂಧ್ರಪದೇಶ, ಮಹಾರಾಷ್ಟ್ರ ಸೇರಿದಂತೆ ಆರು ರಾಜ್ಯಗಳು ಸ್ವಲ್ಪ ಮಟ್ಟಿಗೆ ನಿರಾಳವಾಗುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>