<p><strong>ಚೆನ್ನೈ:</strong> ಕೇಂದ್ರ ಸರ್ಕಾರವು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಆಗ್ರಹಿಸಿ ನಡೆಸಲಾದ ಮೌನ ಪ್ರತಿಭಟನೆಯಲ್ಲಿ ತಮಿಳು ನಟರಾದ ರಜನಿಕಾಂತ್, ಕಮಲ್ ಹಾಸನ್, ವಿಜಯ್ ಹಾಗೂ ಇತರರು ಪಾಲ್ಗೊಂಡಿದ್ದರು.</p>.<p>ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿ (ಟಿಎಫ್ಪಿಸಿ), ದಕ್ಷಿಣ ಭಾರತ ಕಲಾವಿದರ ಸಂಘ (ಎಸ್ಐಎಎ), ದಕ್ಷಿಣ ಭಾರತ ಚಲನಚಿತ್ರ ಉದ್ಯೋಗಿಗಳ ಒಕ್ಕೂಟ (ಎಫ್ಇಎಫ್ಎಸ್ಐ) ಹಾಗೂ ಹಂಚಿಕೆದಾರರ ಸಂಘ ವಳ್ಳುವರ್ ಕೊಟ್ಟಂನಲ್ಲಿ ಮೌನ ಪ್ರತಿಭಟನೆ ನಡೆಸಿತು.</p>.<p>ತೂತುಕುಡಿಯಲ್ಲಿನ ತಾಮ್ರದ ಘಟಕ ಮುಚ್ಚಬೇಕೆಂದೂ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಆರೋಗ್ಯಕ್ಕೆ ಹಾನಿ ಉಂಟಾಗುತ್ತಿದೆ ಎನ್ನುವ ಕಾರಣಕ್ಕಾಗಿ ಈ ಘಟಕ ಮುಚ್ಚಬೇಕೆಂದು ಸ್ಥಳೀಯರು ಹಿಂದಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p><strong>**</strong></p>.<p><strong>ಸಂಚಾರ ಅಸ್ತವ್ಯಸ್ತ</strong></p>.<p><strong>ಹನೂರು (ಚಾಮರಾಜನಗರ): </strong>ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಭಾನುವಾರ ತಮಿಳುನಾಡಿನ ಗೋವಿಂದಪಾಡಿಯಲ್ಲಿ ನಡೆದ ಪ್ರತಿಭಟನೆಯಿಂದ ಚಾಮರಾಜನಗರ ಮತ್ತು ತಮಿಳುನಾಡು ಮಧ್ಯೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕೇಂದ್ರ ಸರ್ಕಾರವು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಆಗ್ರಹಿಸಿ ನಡೆಸಲಾದ ಮೌನ ಪ್ರತಿಭಟನೆಯಲ್ಲಿ ತಮಿಳು ನಟರಾದ ರಜನಿಕಾಂತ್, ಕಮಲ್ ಹಾಸನ್, ವಿಜಯ್ ಹಾಗೂ ಇತರರು ಪಾಲ್ಗೊಂಡಿದ್ದರು.</p>.<p>ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿ (ಟಿಎಫ್ಪಿಸಿ), ದಕ್ಷಿಣ ಭಾರತ ಕಲಾವಿದರ ಸಂಘ (ಎಸ್ಐಎಎ), ದಕ್ಷಿಣ ಭಾರತ ಚಲನಚಿತ್ರ ಉದ್ಯೋಗಿಗಳ ಒಕ್ಕೂಟ (ಎಫ್ಇಎಫ್ಎಸ್ಐ) ಹಾಗೂ ಹಂಚಿಕೆದಾರರ ಸಂಘ ವಳ್ಳುವರ್ ಕೊಟ್ಟಂನಲ್ಲಿ ಮೌನ ಪ್ರತಿಭಟನೆ ನಡೆಸಿತು.</p>.<p>ತೂತುಕುಡಿಯಲ್ಲಿನ ತಾಮ್ರದ ಘಟಕ ಮುಚ್ಚಬೇಕೆಂದೂ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಆರೋಗ್ಯಕ್ಕೆ ಹಾನಿ ಉಂಟಾಗುತ್ತಿದೆ ಎನ್ನುವ ಕಾರಣಕ್ಕಾಗಿ ಈ ಘಟಕ ಮುಚ್ಚಬೇಕೆಂದು ಸ್ಥಳೀಯರು ಹಿಂದಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p><strong>**</strong></p>.<p><strong>ಸಂಚಾರ ಅಸ್ತವ್ಯಸ್ತ</strong></p>.<p><strong>ಹನೂರು (ಚಾಮರಾಜನಗರ): </strong>ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಭಾನುವಾರ ತಮಿಳುನಾಡಿನ ಗೋವಿಂದಪಾಡಿಯಲ್ಲಿ ನಡೆದ ಪ್ರತಿಭಟನೆಯಿಂದ ಚಾಮರಾಜನಗರ ಮತ್ತು ತಮಿಳುನಾಡು ಮಧ್ಯೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>