ಮೇ 17ರಂದು ಬಟಿಂಡಾದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ್ದ ಸಿಧು, ‘2015ರಲ್ಲಿ ಪವಿತ್ರವಾದ ಧರ್ಮಗ್ರಂಥಕ್ಕೆ ಅವಮಾನ ಮಾಡಿದವರ ವಿರುದ್ಧ ಯಾಕೆ ಎಫ್ಐಆರ್ ದಾಖಲಿಸಿರಲಿಲ್ಲ? ಈ ಘಟನೆಯ ಹಿಂದಿರುವವರ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳದಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ’ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಗುಡುಗಿದ್ದರು.