<p><strong>ನವದೆಹಲಿ: </strong>ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ಉಂಟಾಗಿದ್ದ ಮುದ್ರಣ ದೋಷದ ಕಾರಣದಿಂದಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಪರಿಹಾರ ನೀಡಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ನಿರ್ಧರಿಸಿದೆ.</p>.<p>ಇಂಗ್ಲಿಷ್ ಪರೀಕ್ಷೆ ಮಾರ್ಚ್ 12ರಂದು ನಡೆದಿತ್ತು. ಪ್ರಶ್ನೆ ಪತ್ರಿಕೆಯ ಗದ್ಯ ಓದಿ ಉತ್ತರಿಸಿ (Comprehension Passage) ವಿಭಾಗದ ಕೆಲವು ಪ್ರಶ್ನೆಗಳಲ್ಲಿ ದೋಷಗಳಿದ್ದವು. ಇದಕ್ಕೆ ಸಂಬಂಧಿಸಿದಂತೆ ಕೃಪಾಂಕ ನೀಡಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಪ್ರಶ್ನೆಪತ್ರಿಕೆಯಲ್ಲಿನ ಗದ್ಯ ಓದಿ ಸಹಿಷ್ಣುತೆ, ಅಡಚಣೆ ಮತ್ತು ಪ್ರೇರಣೆ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯುವಂತೆ ಸೂಚಿಸಲಾಗಿತ್ತು. ಆದರೆ, ಪ್ರಶ್ನೆಗಳ ಅನುಕ್ರಮಣಿಕೆಯಲ್ಲಿ ದೋಷ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.</p>.<p>‘ಪ್ರಶ್ನೆಪತ್ರಿಕೆಯಲ್ಲಿನ ಮುದ್ರಣ ದೋಷ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬುದು ಮಂಡಳಿಯ ಉದ್ದೇಶ. ಹಾಗಾಗಿ ತಪ್ಪಾಗಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಬರೆದಿರುವ ವಿದ್ಯಾರ್ಥಿಗಳಿಗೆ 2 ಅಂಕಗಳ ಪರಿಹಾರ ನೀಡಲು ನಿರ್ಧರಿಸಲಾಗಿದೆ’ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಸಿಬಿಎಸ್ಇಯ 10, 12ನೇ ತರಗತಿ ಪರೀಕ್ಷೆಗಳು ಮಾರ್ಚ್ 5 ರಿಂದ ಏಪ್ರಿಲ್ 25ರ ವರೆಗೆ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ಉಂಟಾಗಿದ್ದ ಮುದ್ರಣ ದೋಷದ ಕಾರಣದಿಂದಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಪರಿಹಾರ ನೀಡಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ನಿರ್ಧರಿಸಿದೆ.</p>.<p>ಇಂಗ್ಲಿಷ್ ಪರೀಕ್ಷೆ ಮಾರ್ಚ್ 12ರಂದು ನಡೆದಿತ್ತು. ಪ್ರಶ್ನೆ ಪತ್ರಿಕೆಯ ಗದ್ಯ ಓದಿ ಉತ್ತರಿಸಿ (Comprehension Passage) ವಿಭಾಗದ ಕೆಲವು ಪ್ರಶ್ನೆಗಳಲ್ಲಿ ದೋಷಗಳಿದ್ದವು. ಇದಕ್ಕೆ ಸಂಬಂಧಿಸಿದಂತೆ ಕೃಪಾಂಕ ನೀಡಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಪ್ರಶ್ನೆಪತ್ರಿಕೆಯಲ್ಲಿನ ಗದ್ಯ ಓದಿ ಸಹಿಷ್ಣುತೆ, ಅಡಚಣೆ ಮತ್ತು ಪ್ರೇರಣೆ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯುವಂತೆ ಸೂಚಿಸಲಾಗಿತ್ತು. ಆದರೆ, ಪ್ರಶ್ನೆಗಳ ಅನುಕ್ರಮಣಿಕೆಯಲ್ಲಿ ದೋಷ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.</p>.<p>‘ಪ್ರಶ್ನೆಪತ್ರಿಕೆಯಲ್ಲಿನ ಮುದ್ರಣ ದೋಷ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬುದು ಮಂಡಳಿಯ ಉದ್ದೇಶ. ಹಾಗಾಗಿ ತಪ್ಪಾಗಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಬರೆದಿರುವ ವಿದ್ಯಾರ್ಥಿಗಳಿಗೆ 2 ಅಂಕಗಳ ಪರಿಹಾರ ನೀಡಲು ನಿರ್ಧರಿಸಲಾಗಿದೆ’ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಸಿಬಿಎಸ್ಇಯ 10, 12ನೇ ತರಗತಿ ಪರೀಕ್ಷೆಗಳು ಮಾರ್ಚ್ 5 ರಿಂದ ಏಪ್ರಿಲ್ 25ರ ವರೆಗೆ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>