ಹೈದರಾಬಾದ್ (ಪಿಟಿಐ): ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ ರೆಡ್ಡಿ ಅವರ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಇಂಡಿಯಾ ಸಿಮೆಂಟ್ನ ವ್ಯವಸ್ಥಾಪಕ ನಿರ್ದೇಶಕ ಎನ್. ಶ್ರೀನಿವಾಸನ್ ಮತ್ತು ಇತರ ಆರೋಪಿಗಳು ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಈ ಪ್ರಕರಣದ ಮುಂದಿನ ವಿಚಾರಣೆ ನ.20ರಂದು ನಡೆಯಲಿದೆ.
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜಗನ್ ಹಾಗೂ ಇತರ ಕೆಲ ಆರೋಪಿಗಳು ನ್ಯಾಯಾಲಯಕ್ಕೆ ಬಂದಿರಲಿಲ್ಲ.