<p><strong>ನವದೆಹಲಿ (ಪಿಟಿಐ): </strong>ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಹಾಗೂ ಪ್ರತಿಯೊಬ್ಬ ದೇಶವಾಸಿ ಬೆಂಬಲವೂ ನಿಮಗಿದೆ ಎಂಬ ಸಂದೇಶವನ್ನು ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಿಯಾಚಿನ್ಗೆ ತೆರಳಿದ್ದಾರೆ.</p>.<p>ಬಳಿಕ ಮೋದಿ ಅವರು ಶ್ರೀನಗರದಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ.</p>.<p>‘ಸ್ನೇಹಿತರೆ ನಾನು ಸಿಯಾಚಿನ್ಗೆ ತೆರಳುತ್ತಿದ್ದೇನೆ. ಈ ವಿಶೇಷ ದಿನವನ್ನು ವೀರ ಯೋಧರೊಂದಿಗೆ ಕಳೆಯಲು ಸಾಧ್ಯವಾಗುತ್ತಿರುವುದು ನಮ್ಮ ಅದೃಷ್ಟ’ ಎಂದು ಪ್ರವಾಸಕ್ಕೂ ಮುನ್ನ ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p>‘ನಾವು ಯಾವಾಗಲೂ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಎಂಬ ಸಂದೇಶವನ್ನು ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಸೈನಿಕರಿಗೆ ತಲುಪಿಸಲು ತೆರಳುತ್ತಿರುವೆ’ ಎಂದು ಅವರು ಹೇಳಿದ್ದಾರೆ.</p>.<p>ಅಲ್ಲದೇ, ‘ಸಿಯಾಚಿನ್ ಭೇಟಿಯ ಬಳಿಕ ಶ್ರೀನಗರದಲ್ಲಿ ಇತ್ತೀಚಿಗೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರೊಂದಿಗೆ ಸಮಯ ಕಳೆಯುವೆ’ ಎಂದೂ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಹಾಗೂ ಪ್ರತಿಯೊಬ್ಬ ದೇಶವಾಸಿ ಬೆಂಬಲವೂ ನಿಮಗಿದೆ ಎಂಬ ಸಂದೇಶವನ್ನು ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಿಯಾಚಿನ್ಗೆ ತೆರಳಿದ್ದಾರೆ.</p>.<p>ಬಳಿಕ ಮೋದಿ ಅವರು ಶ್ರೀನಗರದಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ.</p>.<p>‘ಸ್ನೇಹಿತರೆ ನಾನು ಸಿಯಾಚಿನ್ಗೆ ತೆರಳುತ್ತಿದ್ದೇನೆ. ಈ ವಿಶೇಷ ದಿನವನ್ನು ವೀರ ಯೋಧರೊಂದಿಗೆ ಕಳೆಯಲು ಸಾಧ್ಯವಾಗುತ್ತಿರುವುದು ನಮ್ಮ ಅದೃಷ್ಟ’ ಎಂದು ಪ್ರವಾಸಕ್ಕೂ ಮುನ್ನ ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p>‘ನಾವು ಯಾವಾಗಲೂ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಎಂಬ ಸಂದೇಶವನ್ನು ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಸೈನಿಕರಿಗೆ ತಲುಪಿಸಲು ತೆರಳುತ್ತಿರುವೆ’ ಎಂದು ಅವರು ಹೇಳಿದ್ದಾರೆ.</p>.<p>ಅಲ್ಲದೇ, ‘ಸಿಯಾಚಿನ್ ಭೇಟಿಯ ಬಳಿಕ ಶ್ರೀನಗರದಲ್ಲಿ ಇತ್ತೀಚಿಗೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರೊಂದಿಗೆ ಸಮಯ ಕಳೆಯುವೆ’ ಎಂದೂ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>