<p><strong>ನವದೆಹಲಿ: </strong>ಗೋಧ್ರಾ ಹತ್ಯಾಕಾಂಡದ ನಂತರ ಗುಜರಾತ್ನಲ್ಲಿ ಕಾಣಿಸಿಕೊಂಡಿದ್ದ ಗಲಭೆಗಳನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ನಿರ್ಲಕ್ಷ್ಯ ತೋರಿದ್ದರು ಮತ್ತು ಪ್ರಚೋದನೆ ನೀಡಿದ್ದರು ಎಂಬ ಆಪಾದನೆ ಬಗ್ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ಅಂತಿಮ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ ಈ ನಿಟ್ಟಿನಲ್ಲಿ ತಾನು ಯಾವುದೇ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.<br /> <br /> ಸುಪ್ರೀಂಕೋರ್ಟಿನ ಈ ನಿಲುವಿನಿಂದಾಗಿ ಮುಖ್ಯಮಂತ್ರಿ ನರೇಂದ್ರ ಮೋದಿ ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಸಿಟ್) ಅಂತಿಮ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ತ್ರಿಸದಸ್ಯ ಪೀಠ ಸೋಮವಾರ ಸೂಚಿಸಿದೆ.<br /> <br /> ಮೋದಿ, ಸರ್ಕಾರದ ಹಿರಿಯ ಅಧಿಕಾರಿಗಳೂ ಸೇರಿದಂತೆ 63 ಮಂದಿಯ ವಿರುದ್ಧ ತನಿಖೆ ನಡೆಸಬೇಕೇ ಬೇಡವೇ ಎಂದು ಮ್ಯಾಜಿಸ್ಟ್ರೇಟ್ ತೀರ್ಮಾನಿಸಲಿದ್ದಾರೆ ಎಂದೂ ಪೀಠ ಅಭಿಪ್ರಾಯಪಟ್ಟಿದೆ.<br /> <br /> ಮೋದಿ ಹಾಗೂ ಇತರರ ವಿರುದ್ಧ ತನಿಖೆ ಕೈಬಿಡಬೇಕೇ ಅಥವಾ ಬೇಡವೇ ಎನ್ನುವ ಕುರಿತು ಮ್ಯಾಜಿಸ್ಟ್ರೇಟ್ ಕೋರ್ಟ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಸಂದರ್ಭದಲ್ಲಿ ಅರ್ಜಿದಾರರಾದ ಝಾಕಿಯಾ ಜಾಫ್ರಿ ಅವರ ವಾದವನ್ನೂ ಪರಿಗಣಿಸಬೇಕು ಎಂದು ನ್ಯಾಯಮೂರ್ತಿಗಳಾದ ಪಿ. ಸದಾಶಿವಂ ಮತ್ತು ಅಫ್ತಾಬ್ ಆಲಂ ಅವರನ್ನು ಒಳಗೊಂಡ ಪೀಠ ಕೆಳ ನ್ಯಾಯಾಲಯಕ್ಕೆ ಸೂಚಿಸಿತು.<br /> <br /> ಹಾಗೆಯೇ ಗಲಭೆಯಲ್ಲಿ ಹತ್ಯೆಗೊಳಗಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಅವರು ನರೇಂದ್ರ ಮೋದಿ ವಿರುದ್ಧ ಸಲ್ಲಿಸಿರುವ ದೂರನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪರಿಶೀಲಿಸಲಿದೆ ಎಂದು ಪೀಠ ಹೇಳಿತು.<br /> <br /> <strong>ಹತ್ಯಾಕಾಂಡ:</strong> ಗೋಧ್ರಾ ನರಮೇಧದ ನಂತರ ಮುಖ್ಯಮಂತ್ರಿ ಮೋದಿ, ಸರ್ಕಾರದ ಹಿರಿಯ ಅಧಿಕಾರಿಗಳು ಗಲಭೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗುಲ್ಬರ್ಗ್ ಗೃಹ ನಿರ್ಮಾಣ ಸೊಸೈಟಿಯಲ್ಲಿ 2002 ರ ಫೆಬ್ರುವರಿ 28 ರಂದು ತಮ್ಮ ಪತಿ ಹಾಗೂ ಇತರ 69 ಮಂದಿಯ ಹತ್ಯೆ ನಡೆದಿತ್ತು ಎಂದು ದೂರಿ ಝಾಕಿಯಾ ಜಾಫ್ರಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದೂ ಅವರು ಕೋರಿದ್ದರು.<br /> <br /> ಝಾಕಿಯಾ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸುಪ್ರಿಂ ಕೋರ್ಟ್ ಸಿಬಿಐನ ಮಾಜಿ ಮುಖ್ಯಸ್ಥ ಆರ್.ಕೆ. ರಾಘವನ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಸಿಟ್) ನೇಮಕ ಮಾಡಿತ್ತು. <br /> <br /> ತನಿಖೆ ನಡೆಸಿದ `ಸಿಟ್~ ತನ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿತ್ತು. ಈ ವರದಿಯನ್ನು ಅಧ್ಯಯನ ಮಾಡಿ ಗೋಪ್ಯ ವರದಿ ಸಲ್ಲಿಸುವಂತೆ ನ್ಯಾಯಾಲಯದ ಸಂಧಾನಕಾರ ಹಾಗೂ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.<br /> <br /> ರಾಮಚಂದ್ರನ್ ಸಲ್ಲಿಸಿದ ವರದಿ ಹಾಗೂ ಸಿಟ್ ಸಲ್ಲಿಸಿದ ಎರಡೂ ವರದಿಗಳನ್ನು ಪರಾಮರ್ಶಿಸಿದ ನ್ಯಾಯಪೀಠ, ಮುಂದಿನ ಕ್ರಮದ ಬಗ್ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ತೀರ್ಮಾನಿಸಲಿದ್ದು, ತಾನು ಯಾವುದೇ ಆದೇಶ ಹೊರಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.<br /> <br /> ಸಿಟ್ ತನ್ನ ಅಂತಿಮ ವರದಿ, ಸಾಕ್ಷ್ಯಗಳ ಹೇಳಿಕೆ ಮತ್ತು ರಾಮಚಂದ್ರನ್ ಅವರ ವರದಿಯನ್ನು ಕೆಳ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ಸೂಚಿಸಿತು.<br /> <br /> <strong>ಮೋದಿಗೆ ಸಂದ ಜಯ- ಬಿಜೆಪಿ:</strong> ಗುಜರಾತ್ ಗಲಭೆ ನಿಯಂತ್ರಣ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ತೀರ್ಮಾನ ಕೈಗೊಳ್ಳಲಿದೆ ಎನ್ನುವ ಸುಪ್ರೀಂ ಕೋರ್ಟ್ ಸೂಚನೆ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಸಂದ ಜಯ ಎಂದು ಬಿಜೆಪಿ ಬಣ್ಣಿಸಿದೆ.<br /> <br /> ಸುಪ್ರೀಂ ಕೋರ್ಟಿನ ಈ ತೀರ್ಮಾನ ಕೇವಲ ಮೋದಿಗೆ ಮಾತ್ರವೇ ನಿರಾಳವಲ್ಲ. ಇದು ಬಿಜೆಪಿಗೆ ಸಿಕ್ಕಿರುವ ಜಯ ಎಂದೂ ಪಕ್ಷದ ವಕ್ತಾರ ಬಲ್ಬೀರ್ ಕೆ.ಪುಂಜ್ ಹೇಳಿದ್ದಾರೆ.</p>.<p><br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗೋಧ್ರಾ ಹತ್ಯಾಕಾಂಡದ ನಂತರ ಗುಜರಾತ್ನಲ್ಲಿ ಕಾಣಿಸಿಕೊಂಡಿದ್ದ ಗಲಭೆಗಳನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ನಿರ್ಲಕ್ಷ್ಯ ತೋರಿದ್ದರು ಮತ್ತು ಪ್ರಚೋದನೆ ನೀಡಿದ್ದರು ಎಂಬ ಆಪಾದನೆ ಬಗ್ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ಅಂತಿಮ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ ಈ ನಿಟ್ಟಿನಲ್ಲಿ ತಾನು ಯಾವುದೇ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.<br /> <br /> ಸುಪ್ರೀಂಕೋರ್ಟಿನ ಈ ನಿಲುವಿನಿಂದಾಗಿ ಮುಖ್ಯಮಂತ್ರಿ ನರೇಂದ್ರ ಮೋದಿ ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಸಿಟ್) ಅಂತಿಮ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಮೂರ್ತಿ ಡಿ.ಕೆ. ಜೈನ್ ನೇತೃತ್ವದ ತ್ರಿಸದಸ್ಯ ಪೀಠ ಸೋಮವಾರ ಸೂಚಿಸಿದೆ.<br /> <br /> ಮೋದಿ, ಸರ್ಕಾರದ ಹಿರಿಯ ಅಧಿಕಾರಿಗಳೂ ಸೇರಿದಂತೆ 63 ಮಂದಿಯ ವಿರುದ್ಧ ತನಿಖೆ ನಡೆಸಬೇಕೇ ಬೇಡವೇ ಎಂದು ಮ್ಯಾಜಿಸ್ಟ್ರೇಟ್ ತೀರ್ಮಾನಿಸಲಿದ್ದಾರೆ ಎಂದೂ ಪೀಠ ಅಭಿಪ್ರಾಯಪಟ್ಟಿದೆ.<br /> <br /> ಮೋದಿ ಹಾಗೂ ಇತರರ ವಿರುದ್ಧ ತನಿಖೆ ಕೈಬಿಡಬೇಕೇ ಅಥವಾ ಬೇಡವೇ ಎನ್ನುವ ಕುರಿತು ಮ್ಯಾಜಿಸ್ಟ್ರೇಟ್ ಕೋರ್ಟ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಸಂದರ್ಭದಲ್ಲಿ ಅರ್ಜಿದಾರರಾದ ಝಾಕಿಯಾ ಜಾಫ್ರಿ ಅವರ ವಾದವನ್ನೂ ಪರಿಗಣಿಸಬೇಕು ಎಂದು ನ್ಯಾಯಮೂರ್ತಿಗಳಾದ ಪಿ. ಸದಾಶಿವಂ ಮತ್ತು ಅಫ್ತಾಬ್ ಆಲಂ ಅವರನ್ನು ಒಳಗೊಂಡ ಪೀಠ ಕೆಳ ನ್ಯಾಯಾಲಯಕ್ಕೆ ಸೂಚಿಸಿತು.<br /> <br /> ಹಾಗೆಯೇ ಗಲಭೆಯಲ್ಲಿ ಹತ್ಯೆಗೊಳಗಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಅವರು ನರೇಂದ್ರ ಮೋದಿ ವಿರುದ್ಧ ಸಲ್ಲಿಸಿರುವ ದೂರನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪರಿಶೀಲಿಸಲಿದೆ ಎಂದು ಪೀಠ ಹೇಳಿತು.<br /> <br /> <strong>ಹತ್ಯಾಕಾಂಡ:</strong> ಗೋಧ್ರಾ ನರಮೇಧದ ನಂತರ ಮುಖ್ಯಮಂತ್ರಿ ಮೋದಿ, ಸರ್ಕಾರದ ಹಿರಿಯ ಅಧಿಕಾರಿಗಳು ಗಲಭೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗುಲ್ಬರ್ಗ್ ಗೃಹ ನಿರ್ಮಾಣ ಸೊಸೈಟಿಯಲ್ಲಿ 2002 ರ ಫೆಬ್ರುವರಿ 28 ರಂದು ತಮ್ಮ ಪತಿ ಹಾಗೂ ಇತರ 69 ಮಂದಿಯ ಹತ್ಯೆ ನಡೆದಿತ್ತು ಎಂದು ದೂರಿ ಝಾಕಿಯಾ ಜಾಫ್ರಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದೂ ಅವರು ಕೋರಿದ್ದರು.<br /> <br /> ಝಾಕಿಯಾ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸುಪ್ರಿಂ ಕೋರ್ಟ್ ಸಿಬಿಐನ ಮಾಜಿ ಮುಖ್ಯಸ್ಥ ಆರ್.ಕೆ. ರಾಘವನ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಸಿಟ್) ನೇಮಕ ಮಾಡಿತ್ತು. <br /> <br /> ತನಿಖೆ ನಡೆಸಿದ `ಸಿಟ್~ ತನ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿತ್ತು. ಈ ವರದಿಯನ್ನು ಅಧ್ಯಯನ ಮಾಡಿ ಗೋಪ್ಯ ವರದಿ ಸಲ್ಲಿಸುವಂತೆ ನ್ಯಾಯಾಲಯದ ಸಂಧಾನಕಾರ ಹಾಗೂ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.<br /> <br /> ರಾಮಚಂದ್ರನ್ ಸಲ್ಲಿಸಿದ ವರದಿ ಹಾಗೂ ಸಿಟ್ ಸಲ್ಲಿಸಿದ ಎರಡೂ ವರದಿಗಳನ್ನು ಪರಾಮರ್ಶಿಸಿದ ನ್ಯಾಯಪೀಠ, ಮುಂದಿನ ಕ್ರಮದ ಬಗ್ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ತೀರ್ಮಾನಿಸಲಿದ್ದು, ತಾನು ಯಾವುದೇ ಆದೇಶ ಹೊರಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.<br /> <br /> ಸಿಟ್ ತನ್ನ ಅಂತಿಮ ವರದಿ, ಸಾಕ್ಷ್ಯಗಳ ಹೇಳಿಕೆ ಮತ್ತು ರಾಮಚಂದ್ರನ್ ಅವರ ವರದಿಯನ್ನು ಕೆಳ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ಸೂಚಿಸಿತು.<br /> <br /> <strong>ಮೋದಿಗೆ ಸಂದ ಜಯ- ಬಿಜೆಪಿ:</strong> ಗುಜರಾತ್ ಗಲಭೆ ನಿಯಂತ್ರಣ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೇ ತೀರ್ಮಾನ ಕೈಗೊಳ್ಳಲಿದೆ ಎನ್ನುವ ಸುಪ್ರೀಂ ಕೋರ್ಟ್ ಸೂಚನೆ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಸಂದ ಜಯ ಎಂದು ಬಿಜೆಪಿ ಬಣ್ಣಿಸಿದೆ.<br /> <br /> ಸುಪ್ರೀಂ ಕೋರ್ಟಿನ ಈ ತೀರ್ಮಾನ ಕೇವಲ ಮೋದಿಗೆ ಮಾತ್ರವೇ ನಿರಾಳವಲ್ಲ. ಇದು ಬಿಜೆಪಿಗೆ ಸಿಕ್ಕಿರುವ ಜಯ ಎಂದೂ ಪಕ್ಷದ ವಕ್ತಾರ ಬಲ್ಬೀರ್ ಕೆ.ಪುಂಜ್ ಹೇಳಿದ್ದಾರೆ.</p>.<p><br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>