ನವದೆಹಲಿ (ಪಿಟಿಐ): ಹೂಡಿಕೆದಾರರ ಹಣವನ್ನು ವಾಪಸ್ ಮಾಡಲು ಅಗತ್ಯ ವ್ಯವಸ್ಥೆ ಮಾಡುವುದಕ್ಕೆ ಅನುಕೂಲವಾಗಲು ತಮ್ಮನ್ನು ಗೃಹ ಬಂಧನದಲ್ಲಿ ಇಡಬೇಕು ಎಂದು ಸಹರಾ ಸಮೂಹದ ಮುಖ್ಯಸ್ಥ ಸುಬ್ರತೊ ರಾಯ್ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವುದರಿಂದ ಅವರು ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ.
‘ನೀವು ಈಗ ನ್ಯಾಯಾಂಗ ಬಂಧನದಲ್ಲಿ ಅಂದರೆ ನಮ್ಮ ಸುಪರ್ದಿಯಲ್ಲಿ ಇದ್ದೀರಿ, ಆದ್ದರಿಂದ ನಿಮಗೆ ಜೈಲು ಶಿಕ್ಷೆಯಾಗಿದೆ ಎಂಬ ಭಾವನೆ ಬೇಡ’ ಎಂದು ನ್ಯಾಯಮೂರ್ತಿ ಕೆ. ಎಸ್. ರಾಧಾಕೃಷ್ಣನ್ ನೇತೃತ್ವದ ನ್ಯಾಯಪೀಠವು ತಿಳಿಸಿದೆ.