<p><strong>ಭೋಪಾಲ (ಪಿಟಿಐ):</strong> ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿ ಅಂಜಲಿ ಗುಪ್ತಾ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರೂಪ್ ಕ್ಯಾಪ್ಟನ್ ಅಮಿತ್ ಗುಪ್ತಾ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.<br /> <br /> `ಅಮಿತ್ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆ ಸೆಕ್ಷೆನ್ 306 ಅಡಿ (ಆತ್ಮಹತ್ಯೆಗೆ ಕುಮ್ಮಕ್ಕು) ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಶೀಘ್ರ ನ್ಯಾಯಾಲಯದ ಎದುರು ಹಾಜರು ಪಡಿಸಲಾಗುವುದು~ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಚಾಂಡೇಲ್ ತಿಳಿಸಿದ್ದಾರೆ.</p>.<p>ಸೆಪ್ಟೆಂಬರ್ 11ರಂದು ಅಂಜಲಿ ಗುಪ್ತಾ ಅವರು ಅಮಿತ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.</p>.<p>ಅಂಜಲಿ ಗುಪ್ತಾ ಅವರ ಶವದ ಮರಣೋತ್ತರ ಪರೀಕ್ಷೆಯ ವರದಿ ಮಂಗಳವಾರ ಬಂದಿದ್ದು, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.<br /> <br /> `ಅಂಜಲಿ 2001ರಿಂದ ಅಮಿತ್ ಜತೆ ಒಟ್ಟಿಗೆ ವಾಸವಿದ್ದಳು. ಅಂಜಲಿಯೊಂದಿಗೆ ಮದುವೆಯಾಗುವುದಾಗಿ ಅಮಿತ್ ಭರವಸೆ ನೀಡಿದ್ದ. ಆದರೆ, ಹೇಳಿದಂತೆ ನಡೆದುಕೊಳ್ಳಲಿಲ್ಲ ಎಂಬ ಸಂಗತಿಯನ್ನು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ~ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದೇ ವೇಳೆ ಅಂಜಲಿ ಗುಪ್ತಾ ಅಂತ್ಯಸಂಸ್ಕಾರ ಇಲ್ಲಿನ ಸುಭಾಷ ನಗರದ ರುದ್ರಭೂಮಿಯಲ್ಲಿ ಸೋಮವಾರ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ (ಪಿಟಿಐ):</strong> ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿ ಅಂಜಲಿ ಗುಪ್ತಾ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರೂಪ್ ಕ್ಯಾಪ್ಟನ್ ಅಮಿತ್ ಗುಪ್ತಾ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.<br /> <br /> `ಅಮಿತ್ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆ ಸೆಕ್ಷೆನ್ 306 ಅಡಿ (ಆತ್ಮಹತ್ಯೆಗೆ ಕುಮ್ಮಕ್ಕು) ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಶೀಘ್ರ ನ್ಯಾಯಾಲಯದ ಎದುರು ಹಾಜರು ಪಡಿಸಲಾಗುವುದು~ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಚಾಂಡೇಲ್ ತಿಳಿಸಿದ್ದಾರೆ.</p>.<p>ಸೆಪ್ಟೆಂಬರ್ 11ರಂದು ಅಂಜಲಿ ಗುಪ್ತಾ ಅವರು ಅಮಿತ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.</p>.<p>ಅಂಜಲಿ ಗುಪ್ತಾ ಅವರ ಶವದ ಮರಣೋತ್ತರ ಪರೀಕ್ಷೆಯ ವರದಿ ಮಂಗಳವಾರ ಬಂದಿದ್ದು, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.<br /> <br /> `ಅಂಜಲಿ 2001ರಿಂದ ಅಮಿತ್ ಜತೆ ಒಟ್ಟಿಗೆ ವಾಸವಿದ್ದಳು. ಅಂಜಲಿಯೊಂದಿಗೆ ಮದುವೆಯಾಗುವುದಾಗಿ ಅಮಿತ್ ಭರವಸೆ ನೀಡಿದ್ದ. ಆದರೆ, ಹೇಳಿದಂತೆ ನಡೆದುಕೊಳ್ಳಲಿಲ್ಲ ಎಂಬ ಸಂಗತಿಯನ್ನು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ~ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಇದೇ ವೇಳೆ ಅಂಜಲಿ ಗುಪ್ತಾ ಅಂತ್ಯಸಂಸ್ಕಾರ ಇಲ್ಲಿನ ಸುಭಾಷ ನಗರದ ರುದ್ರಭೂಮಿಯಲ್ಲಿ ಸೋಮವಾರ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>