<p><strong>ನವದೆಹಲಿ (ಪಿಟಿಐ): </strong>ಗೊತ್ತಿಲ್ಲದ ಕಾಯಿಲೆಗೆ ಗೊತ್ತಿಲ್ಲದ ರಾಷ್ಟ್ರದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ರಾತ್ರಿ ಸ್ವದೇಶಕ್ಕೆ ಹಿಂತಿರುಗುವ ಸಾಧ್ಯತೆಗಳಿವೆ.<br /> <br /> ಒಂದು ತಿಂಗಳಿಗೂ ಹೆಚ್ಚಿನ ಕಾಲಾವಧಿಯ ಬಳಿಕ ಅವರು ಭಾರತಕ್ಕೆ ವಾಪಸಾಗುತ್ತಿದ್ದು, ಪುತ್ರಿ ಪ್ರಿಯಾಂಕಾ ಅವರ ಜೊತೆಗಿದ್ದಾರೆ ಎಂದು ನಂಬಲರ್ಹ ಮೂಲಗಳು ಹೇಳಿವೆ.<br /> <br /> 64ರ ಹರೆಯದ ಸೋನಿಯಾ ಗಾಂಧಿ ಅವರು ಆಗಸ್ಟ್ 2ರಂದು ರಾಷ್ಟ್ರದಿಂದ ಹೊರ ಹೋಗಿದ್ದು, ಆಗಸ್ಟ್ 4 ಮತ್ತು 5ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.<br /> <br /> ಸೋನಿಯಾ ಅವರು ರಾಷ್ಟ್ರದಿಂದ ಹೊರಹೋದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಸಂಕ್ಷಿಪ್ತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು ಶಸ್ತ್ರಚಿಕಿತ್ಸೆಗೆ ಸಲಹೆ ಮಾಡಲಾಗಿದೆ ಎಂದು ಪ್ರಕಟಿಸಿತ್ತು.<br /> <br /> ಅವರ ಅನುಪಸ್ಥತಿಯಲ್ಲಿ ರಾಹುಲ್ ಗಾಂಧಿ, ಹಿರಿಯ ನಾಯಕರಾದ ಎ.ಕೆ. ಆಂಟನಿ, ಅಹಮದ್ ಪಟೇಲ್ ಮತ್ತು ದ್ವಿವೇದಿ ಅವರನ್ನು ಒಳಗೊಂಡ ನಾಲ್ವರ ತಂಡಕ್ಕೆ ಪಕ್ಷದ ಉಸ್ತುವಾರಿ ನೋಡಿಕೊಳ್ಳಲು ಹೇಳಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಗೊತ್ತಿಲ್ಲದ ಕಾಯಿಲೆಗೆ ಗೊತ್ತಿಲ್ಲದ ರಾಷ್ಟ್ರದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ರಾತ್ರಿ ಸ್ವದೇಶಕ್ಕೆ ಹಿಂತಿರುಗುವ ಸಾಧ್ಯತೆಗಳಿವೆ.<br /> <br /> ಒಂದು ತಿಂಗಳಿಗೂ ಹೆಚ್ಚಿನ ಕಾಲಾವಧಿಯ ಬಳಿಕ ಅವರು ಭಾರತಕ್ಕೆ ವಾಪಸಾಗುತ್ತಿದ್ದು, ಪುತ್ರಿ ಪ್ರಿಯಾಂಕಾ ಅವರ ಜೊತೆಗಿದ್ದಾರೆ ಎಂದು ನಂಬಲರ್ಹ ಮೂಲಗಳು ಹೇಳಿವೆ.<br /> <br /> 64ರ ಹರೆಯದ ಸೋನಿಯಾ ಗಾಂಧಿ ಅವರು ಆಗಸ್ಟ್ 2ರಂದು ರಾಷ್ಟ್ರದಿಂದ ಹೊರ ಹೋಗಿದ್ದು, ಆಗಸ್ಟ್ 4 ಮತ್ತು 5ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.<br /> <br /> ಸೋನಿಯಾ ಅವರು ರಾಷ್ಟ್ರದಿಂದ ಹೊರಹೋದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಸಂಕ್ಷಿಪ್ತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು ಶಸ್ತ್ರಚಿಕಿತ್ಸೆಗೆ ಸಲಹೆ ಮಾಡಲಾಗಿದೆ ಎಂದು ಪ್ರಕಟಿಸಿತ್ತು.<br /> <br /> ಅವರ ಅನುಪಸ್ಥತಿಯಲ್ಲಿ ರಾಹುಲ್ ಗಾಂಧಿ, ಹಿರಿಯ ನಾಯಕರಾದ ಎ.ಕೆ. ಆಂಟನಿ, ಅಹಮದ್ ಪಟೇಲ್ ಮತ್ತು ದ್ವಿವೇದಿ ಅವರನ್ನು ಒಳಗೊಂಡ ನಾಲ್ವರ ತಂಡಕ್ಕೆ ಪಕ್ಷದ ಉಸ್ತುವಾರಿ ನೋಡಿಕೊಳ್ಳಲು ಹೇಳಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>