ನವದೆಹಲಿ (ಐಎಎನ್ಎಸ್): ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜೀನಾಮೆ ಪಡೆಯಲು ಪಕ್ಷದ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ನಿರಾಕರಿಸಿದೆ.
ಇದೇ ವೇಳೆ ಸೋನಿಯಾ ಮತ್ತು ರಾಹುಲ್ ಅವರ ನಾಯಕತ್ವದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿ, ಸಿಡಬ್ಲ್ಯುಸಿ ಒಮ್ಮತದ ನಿರ್ಣಯ ಕೈಗೊಂಡಿದೆ.
ರಾಹುಲ್ ಗಾಂಧಿ ನಾಯಕತ್ವದಲ್ಲಿ ನಾವು ಹೋರಾಟ ನಡೆಸುವುದಾಗಿ ಪಕ್ಷದ ವಕ್ತಾರ ರಾಜಾ ಬಬ್ಬರ್ ತಿಳಿಸಿದ್ದಾರೆ.