ಮುಂಬೈ (ಐಎಎನ್ಎಸ್): ಇಂಡಿಯನ್ ಮುಜಾಹಿದೀನ್ ಸಂಘಟನೆಯ ಶಂಕಿತ ಸಂಚುಕೋರ ಅಫ್ಜಲ್ ಉಸ್ಮಾನಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಸ್ಮಾನಿ 2008ರಲ್ಲಿ ಸೂರತ್ ಮತ್ತು ಅಹಮದಾಬಾದ್ ನಗರಗಳಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪವನ್ನು ಎದುರಿಸುತ್ತಿದ್ದ.
ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳನ್ನು ರಾಯಗಡ ಜಿಲ್ಲೆಯ ತಲೋಜ ಜೈಲಿನಿಂದ ದಕ್ಷಿಣ ಮುಂಬೈನ ಸೆಷನ್ಸ್ ನ್ಯಾಯಾಲಯಕ್ಕೆ ಕರೆತರುವ ವೇಳೆಯಲ್ಲಿ ಘಟನೆ ನಡೆದಿದ್ದು, ಪೊಲೀಸರನ್ನು ಮುಜುಗರಕ್ಕೀಡು ಮಾಡಿದೆ. ಉಸ್ಮಾನಿ ಪತ್ತೆಗೆ ಮುಂಬೈ ಪೊಲೀಸರು ತಂಡ ರಚಿಸಿದ್ದಾರೆ.