<p>ಹರಿದ್ವಾರ (ಪಿಟಿಐ): ಇಲ್ಲಿನ ಹರ್ ಕೀ ಪೌರಿ ಸಮೀಪದ ಚಂಡಿದ್ವೀಪ ಪ್ರದೇಶದಲ್ಲಿನ ಆಶ್ರಮವೊಂದರಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ 16 ಮಂದಿ ಮೃತರಾಗಿ ಇತರ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಆಶ್ರಮದ ಸಂಸ್ಥಾಪಕ ಪಂಡಿತ ಶ್ರೀರಾಮ ಶರ್ಮ ಶತಮಾನೋತ್ಸವ ಸಮಾರಂಭದ ಅಂಗವಾಗಿ ಯೋಜಿಸಲಾಗಿದ್ದ ~ಯಜ್ಞ~ದಲ್ಲಿ ಪಾಲ್ಗೊಳ್ಳುವ ಸಲುವಾಗಿ ಶಕ್ತಿಕುಂಜ ಆಶ್ರಮದ ಮಹಾದ್ವಾರದಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಒಳಪ್ರವೇಶಿಸಲು ಯತ್ನಿಸಿದಾಗ ಕಾಲ್ತುಳಿತ ಸಂಭವಿಸಿತು.<br /> <br /> ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.<br /> <br /> <strong>ಪರಿಹಾರ: </strong>ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಲ್ತುಳಿತದಿಂದ ಮೃತಪಟ್ಟವರ ಕುಟಂಬಕ್ಕೆ ಒಂದು ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ರೂ. 50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ವಾಕ್ತರರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿದ್ವಾರ (ಪಿಟಿಐ): ಇಲ್ಲಿನ ಹರ್ ಕೀ ಪೌರಿ ಸಮೀಪದ ಚಂಡಿದ್ವೀಪ ಪ್ರದೇಶದಲ್ಲಿನ ಆಶ್ರಮವೊಂದರಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ 16 ಮಂದಿ ಮೃತರಾಗಿ ಇತರ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಆಶ್ರಮದ ಸಂಸ್ಥಾಪಕ ಪಂಡಿತ ಶ್ರೀರಾಮ ಶರ್ಮ ಶತಮಾನೋತ್ಸವ ಸಮಾರಂಭದ ಅಂಗವಾಗಿ ಯೋಜಿಸಲಾಗಿದ್ದ ~ಯಜ್ಞ~ದಲ್ಲಿ ಪಾಲ್ಗೊಳ್ಳುವ ಸಲುವಾಗಿ ಶಕ್ತಿಕುಂಜ ಆಶ್ರಮದ ಮಹಾದ್ವಾರದಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಒಳಪ್ರವೇಶಿಸಲು ಯತ್ನಿಸಿದಾಗ ಕಾಲ್ತುಳಿತ ಸಂಭವಿಸಿತು.<br /> <br /> ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.<br /> <br /> <strong>ಪರಿಹಾರ: </strong>ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಲ್ತುಳಿತದಿಂದ ಮೃತಪಟ್ಟವರ ಕುಟಂಬಕ್ಕೆ ಒಂದು ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ರೂ. 50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ವಾಕ್ತರರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>