<p><strong>ಶಾಂತಿನಿಕೇತನ (ಪಿಟಿಐ):</strong> ಐದನೆಯ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹಾಸಿಗೆ ಒದ್ದೆ ಮಾಡಿದ್ದಕ್ಕೆ ವಿದ್ಯಾರ್ಥಿನಿಲಯದ ವಾರ್ಡನ್ ಆಕೆಗೆ ಮೂತ್ರ ಕುಡಿಯುವ ಶಿಕ್ಷೆ ವಿಧಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.<br /> <br /> ರವೀಂದ್ರ ನಾಥ್ ಠಾಗೋರ್ ಸ್ಥಾಪಿಸಿದ್ದ ಪ್ರತಿಷ್ಠಿತ ವಿಶ್ವಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಈ ಸಂಬಂಧ ವಿವಿಗೆ ನೋಟಿಸ್ ನೀಡಲು ನಿರ್ಧರಿಸಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶ್ವಭಾರತಿ ನಾಲ್ಕು ಸದಸ್ಯರ ಸಮಿತಿಯೊಂದನ್ನು ರಚಿಸಿದೆ.<br /> <br /> ವಿವರ: ವಿಶ್ವಭಾರತಿ ಆವರಣದ ಕರಬಿ ವಿದ್ಯಾರ್ಥಿನಿಲಯದಲ್ಲಿ ಬಾಲಕಿಯೊಬ್ಬಳು ಅಸ್ವಸ್ಥಳಾಗಿದ್ದಳು. ಹಾಸಿಗೆಯಲ್ಲೇ ಮೂತ್ರ ಮಾಡಿದ್ದಕ್ಕೆ ಕುಪಿತಗೊಂಡ ವಾರ್ಡನ್, ಬೆಡ್ಶೀಟ್ ಆಕೆಯ ಬಾಯಿಯಲ್ಲಿ ಹಿಂಡಿದರು. ಬಾಲಕಿಯ ತಾಯಿ ಮಗಳ ದೇಹಸ್ಥಿತಿ ವಿಚಾರಿಸಲು ಕರೆ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ವಾರ್ಡನ್ ವಿರುದ್ಧ ದೂರು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾಂತಿನಿಕೇತನ (ಪಿಟಿಐ):</strong> ಐದನೆಯ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹಾಸಿಗೆ ಒದ್ದೆ ಮಾಡಿದ್ದಕ್ಕೆ ವಿದ್ಯಾರ್ಥಿನಿಲಯದ ವಾರ್ಡನ್ ಆಕೆಗೆ ಮೂತ್ರ ಕುಡಿಯುವ ಶಿಕ್ಷೆ ವಿಧಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.<br /> <br /> ರವೀಂದ್ರ ನಾಥ್ ಠಾಗೋರ್ ಸ್ಥಾಪಿಸಿದ್ದ ಪ್ರತಿಷ್ಠಿತ ವಿಶ್ವಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಈ ಸಂಬಂಧ ವಿವಿಗೆ ನೋಟಿಸ್ ನೀಡಲು ನಿರ್ಧರಿಸಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶ್ವಭಾರತಿ ನಾಲ್ಕು ಸದಸ್ಯರ ಸಮಿತಿಯೊಂದನ್ನು ರಚಿಸಿದೆ.<br /> <br /> ವಿವರ: ವಿಶ್ವಭಾರತಿ ಆವರಣದ ಕರಬಿ ವಿದ್ಯಾರ್ಥಿನಿಲಯದಲ್ಲಿ ಬಾಲಕಿಯೊಬ್ಬಳು ಅಸ್ವಸ್ಥಳಾಗಿದ್ದಳು. ಹಾಸಿಗೆಯಲ್ಲೇ ಮೂತ್ರ ಮಾಡಿದ್ದಕ್ಕೆ ಕುಪಿತಗೊಂಡ ವಾರ್ಡನ್, ಬೆಡ್ಶೀಟ್ ಆಕೆಯ ಬಾಯಿಯಲ್ಲಿ ಹಿಂಡಿದರು. ಬಾಲಕಿಯ ತಾಯಿ ಮಗಳ ದೇಹಸ್ಥಿತಿ ವಿಚಾರಿಸಲು ಕರೆ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ವಾರ್ಡನ್ ವಿರುದ್ಧ ದೂರು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>