<p><strong>ಶ್ರೀನಗರ: </strong> ಹಿಮಕುಸಿತದಲ್ಲಿ ಸಿಲುಕಿ ಹತ್ತು ಯೋಧರು ಸಾವಿಗೀಡಾಗಿದ್ದು, ಹಲವು ಸೈನಿಕರು ಕಾಣೆಯಾಗಿದ್ದಾರೆ.</p>.<p>ದೇಶದಾದ್ಯಂತ ಗಣ್ಯರಾಜ್ಯೋತ್ಸವ ಆಚರಣೆ ನಡೆಯುತ್ತಿದ್ದರೆ, ಗಡಿಯಲ್ಲಿ ರಾಷ್ಟ್ರ ಕಾಯುತ್ತಿರುವ ಯೋಧರು ದುರ್ಘನೆಯಲ್ಲಿ ಸಾವಿಗೀಡಾಗಿದ್ದಾರೆ. ರಾಷ್ಟ್ರಕಾಯುವ ಯೋಧರ ಸಾವಿನ ಸುದ್ದಿ ಜಮ್ಮು ಮತ್ತು ಕಾಶ್ಮೀರದ ಗುರೆಜ್ ವಲಯದಲ್ಲಿ ಉಂಟಾಗಿರುವ ಹಿಮಕುಸಿತದಲ್ಲಿ ಭಾರತೀಯ ಸೇನೆಯ ಯೋಧರು ಸಿಲುಕಿ ಮೃತಪಟ್ಟಿದ್ದಾರೆ.</p>.<p>ಗಡಿ ನಿಯಂತ್ರಣ ಸಮೀಪದ ಗುರೆಜ್ ವಲಯದ ಸೇನಾ ಶಿಬಿರದ ಮೇಲೆ ಎರಡು ಬಾರಿ ಹಿಮಕುಸಿತವಾಗಿದೆ. ಬುಧವಾರ ಸಂಜೆ ನಡೆದಿರುವ ಹಿಮಕುಸಿತದಲ್ಲಿ ಅನೇಕ ಸೈನಿಕರು ಸಿಲುಕಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯದ ಮಾಹಿತಿ ಪ್ರಕಾರ 10 ಯೋಧರು ಮೃತಪಟ್ಟಿದ್ದು, ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಸೇನಾ ಕಾರ್ಯಾಚರಣೆಯಲ್ಲಿ ಈವರೆಗೂ 7 ಯೋಧರನ್ನು ರಕ್ಷಿಸಲಾಗಿದೆ.</p>.<p>ಪ್ರದೇಶವು ಸಂಪೂರ್ಣ ಹಿಮಾವೃತವಾಗಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳೆಗಿನ ಕಾರ್ಯಾಚರಣೆಯಲ್ಲಿ 3 ಯೋಧರ ದೇಹ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong> ಹಿಮಕುಸಿತದಲ್ಲಿ ಸಿಲುಕಿ ಹತ್ತು ಯೋಧರು ಸಾವಿಗೀಡಾಗಿದ್ದು, ಹಲವು ಸೈನಿಕರು ಕಾಣೆಯಾಗಿದ್ದಾರೆ.</p>.<p>ದೇಶದಾದ್ಯಂತ ಗಣ್ಯರಾಜ್ಯೋತ್ಸವ ಆಚರಣೆ ನಡೆಯುತ್ತಿದ್ದರೆ, ಗಡಿಯಲ್ಲಿ ರಾಷ್ಟ್ರ ಕಾಯುತ್ತಿರುವ ಯೋಧರು ದುರ್ಘನೆಯಲ್ಲಿ ಸಾವಿಗೀಡಾಗಿದ್ದಾರೆ. ರಾಷ್ಟ್ರಕಾಯುವ ಯೋಧರ ಸಾವಿನ ಸುದ್ದಿ ಜಮ್ಮು ಮತ್ತು ಕಾಶ್ಮೀರದ ಗುರೆಜ್ ವಲಯದಲ್ಲಿ ಉಂಟಾಗಿರುವ ಹಿಮಕುಸಿತದಲ್ಲಿ ಭಾರತೀಯ ಸೇನೆಯ ಯೋಧರು ಸಿಲುಕಿ ಮೃತಪಟ್ಟಿದ್ದಾರೆ.</p>.<p>ಗಡಿ ನಿಯಂತ್ರಣ ಸಮೀಪದ ಗುರೆಜ್ ವಲಯದ ಸೇನಾ ಶಿಬಿರದ ಮೇಲೆ ಎರಡು ಬಾರಿ ಹಿಮಕುಸಿತವಾಗಿದೆ. ಬುಧವಾರ ಸಂಜೆ ನಡೆದಿರುವ ಹಿಮಕುಸಿತದಲ್ಲಿ ಅನೇಕ ಸೈನಿಕರು ಸಿಲುಕಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.</p>.<p>ಸದ್ಯದ ಮಾಹಿತಿ ಪ್ರಕಾರ 10 ಯೋಧರು ಮೃತಪಟ್ಟಿದ್ದು, ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಸೇನಾ ಕಾರ್ಯಾಚರಣೆಯಲ್ಲಿ ಈವರೆಗೂ 7 ಯೋಧರನ್ನು ರಕ್ಷಿಸಲಾಗಿದೆ.</p>.<p>ಪ್ರದೇಶವು ಸಂಪೂರ್ಣ ಹಿಮಾವೃತವಾಗಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳೆಗಿನ ಕಾರ್ಯಾಚರಣೆಯಲ್ಲಿ 3 ಯೋಧರ ದೇಹ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>