ಈ ಮೂಲಕ, ನಗರ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಮದ್ಯದ ಅಂಗಡಿಗಳು ಮುಂದುವರಿಯಲು ಅವಕಾಶ ಕೊಡಲಾಗಿತ್ತು. ಅದನ್ನು ಪ್ರಶ್ನಿಸಿ ಅರೈವ್ ಸೇಫ್ ಸೊಸೈಟಿ ಎಂಬ ಎನ್ಜಿಒ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಮತ್ತು ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಿ, ಪಂಜಾಬ್ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದು ಹೇಳಿದೆ. ಕರ್ನಾಟಕವೂ ಸೇರಿ ಹಲವು ರಾಜ್ಯಗಳು ಪಂಜಾಬ್ ಸರ್ಕಾರದ ರೀತಿಯಲ್ಲಿಯೇ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಿದ್ದವು.