<p><strong>ರಾಂಚಿ (ಪಿಟಿಐ</strong>): ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸಮ್ಮಿಶ್ರ ಸರ್ಕಾರದ ನಾಯಕನಾಗಿ ಆಯ್ಕೆಗೊಂಡ ಜೆಎಂಎಂ ಮುಖಂಡ ಹೇಮಂತ್ ಸೋರೆನ್ ಅವರು ಶನಿವಾರ ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜ್ಯದಲ್ಲಿ ಸುಮಾರು ತಿಂಗಳಿಂದ ಜಾರಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ಬೆಳಿಗ್ಗೆ ಹಿಂತೆಗೆದುಕೊಳ್ಳುತ್ತಿದ್ದಂತೆ ಜೆಎಂಎಂ ಮುಖ್ಯಸ್ಥ ಶಿಬು ಸೋರೆನ್ ಅವರ ಪುತ್ರ ಹೇಮಂತ್ (37) ಅವರಿಗೆ ರಾಜ್ಯಪಾಲ ಸೈಯದ್ ಅಹಮ್ಮದ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಹೇಮಂತ್ ಅವರ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಕಾಂಗ್ರೆಸ್ನ ರಾಜೇಂದ್ರ ಪ್ರಸಾದ್ ಸಿಂಗ್ ಮತ್ತು ಆರ್ಜೆಡಿಯ ಅನ್ನಪೂರ್ಣಾ ದೇವಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜ್ಯಪಾಲರನ್ನು ಭೇಟಿ ಮಾಡಿದ ಸೋರೆನ್ ಅವರು ವಿಧಾನಸಭೆಯ 82 ಸದಸ್ಯರಲ್ಲಿ ತಮಗೆ 43 ಸದಸ್ಯರ ಬೆಂಬಲವಿದೆ ಎಂದು ಬೆಂಬಲಿತ ಸದಸ್ಯರ ಪಟ್ಟಿ ನೀಡಿದ್ದರು. ಸದನದಲ್ಲಿ ಬಹುಮತ ಸಾಬೀತುಪಡಿಸಿದ ನಂತರ ಹೇಮಂತ್ ಅವರು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಪಿಟಿಐ</strong>): ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸಮ್ಮಿಶ್ರ ಸರ್ಕಾರದ ನಾಯಕನಾಗಿ ಆಯ್ಕೆಗೊಂಡ ಜೆಎಂಎಂ ಮುಖಂಡ ಹೇಮಂತ್ ಸೋರೆನ್ ಅವರು ಶನಿವಾರ ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜ್ಯದಲ್ಲಿ ಸುಮಾರು ತಿಂಗಳಿಂದ ಜಾರಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ಬೆಳಿಗ್ಗೆ ಹಿಂತೆಗೆದುಕೊಳ್ಳುತ್ತಿದ್ದಂತೆ ಜೆಎಂಎಂ ಮುಖ್ಯಸ್ಥ ಶಿಬು ಸೋರೆನ್ ಅವರ ಪುತ್ರ ಹೇಮಂತ್ (37) ಅವರಿಗೆ ರಾಜ್ಯಪಾಲ ಸೈಯದ್ ಅಹಮ್ಮದ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಹೇಮಂತ್ ಅವರ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಕಾಂಗ್ರೆಸ್ನ ರಾಜೇಂದ್ರ ಪ್ರಸಾದ್ ಸಿಂಗ್ ಮತ್ತು ಆರ್ಜೆಡಿಯ ಅನ್ನಪೂರ್ಣಾ ದೇವಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.<br /> <br /> ರಾಜ್ಯಪಾಲರನ್ನು ಭೇಟಿ ಮಾಡಿದ ಸೋರೆನ್ ಅವರು ವಿಧಾನಸಭೆಯ 82 ಸದಸ್ಯರಲ್ಲಿ ತಮಗೆ 43 ಸದಸ್ಯರ ಬೆಂಬಲವಿದೆ ಎಂದು ಬೆಂಬಲಿತ ಸದಸ್ಯರ ಪಟ್ಟಿ ನೀಡಿದ್ದರು. ಸದನದಲ್ಲಿ ಬಹುಮತ ಸಾಬೀತುಪಡಿಸಿದ ನಂತರ ಹೇಮಂತ್ ಅವರು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>