<p><strong>ತಿರುವನಂತಪುರ (ಪಿಟಿಐ): </strong>ಕೇರಳ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿರುವ ಸೋಲಾರ್ ಫಲಕ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.</p>.<p>ಹಗರಣ ಸಂಬಂಧ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಇಂಧನ ಸಚಿವ ಅರ್ಯಾಡನ್ ಮೊಹಮ್ಮದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯ ಗುರುವಾರ ಆದೇಶಿಸಿದೆ.</p>.<p>ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರು ಚಾಂಡಿ ಮತ್ತು ಸಚಿವ ಆರ್ಯಾಡನ್ ಮೊಹಮ್ಮದ್ ಅವರಿಗೆ ಲಂಚ ನೀಡಿರುವುದಾಗಿ ಆರೋಪ ಮಾಡಿದ ಒಂದು ದಿನ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>ಪಿ.ಡಿ.ಜೋಸೆಫ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜಾಗೃತ ದಳದ ವಿಶೇಷ ನ್ಯಾಯಾಲಯ ಈ ಸೂಚನೆ ನೀಡಿದೆ.</p>.<p>ಕೋರ್ಟ್ ಆದೇಶವು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರಕ್ಕೆ ತೀವ್ರ ಮುಜುಗರದ ಜತೆಗೆ ಬಿಸಿ ತುಪ್ಪವಾಗಿದೆ. ಮತ್ತೊಂದಡೆ, ಇಬ್ಬರು ಕೂಡಲೇ ಪದತ್ಯಾಗ ಮಾಡಬೇಕು ಎಂದು ಸಿಪಿಎಂ ನೇತೃತ್ವದ ಎಲ್ಡಿಎಫ್ ಒತ್ತಾಯಿಸಿದೆ.<br /> <br /> <strong>ಚಾಂಡಿ ಸವಾಲು</strong>: ಆದರೆ, ಈ ಸಂಬಂಧ ಪ್ರತಿಕ್ರಿಯಿಸಿದ ಚಾಂಡಿ ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದರು. 'ಸುಳ್ಳು ಆರೋಪಗಳ ಮೂಲಕ ತಮ್ಮನ್ನು ಮುಖ್ಯಮಂತ್ರಿ ಹುದ್ದೆಯಿಂದ ಕಿತ್ತುಹಾಕಲಾಗದು' ಎಂದರು.</p>.<p>ಅಲ್ಲದೇ, 'ಆರೋಪಗಳು ಸಾಬೀತಾದಲ್ಲಿ ಪದತ್ಯಾಗ ಮಾಡುವ ಜತೆಗೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದುವುದಾಗಿ' ಸವಾಲು ಹಾಕಿದರು.</p>.<p><strong>ರಾಜೀನಾಮೆಗೆ ಎಲ್ಡಿಎಫ್ ಪಟ್ಟು</strong>: ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿರೋಧ ಪಕ್ಷದ ನಾಯಕ ವಿ.ಎಸ್.ಅಚ್ಯುತಾನಂದನ್, ಅಧಿಕಾರದಲ್ಲಿ ಮುಂದುವರೆಯಲು ಚಾಂಡಿ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.</p>.<p>ಚಾಂಡಿ ಪದತ್ಯಾಗ ಮಾಡದಿದ್ದರೇ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಹಿಂದೆ ಬಾರ್ ಲೈಸೆನ್ಸ್ ಲಂಚ ಪ್ರಕರಣದಲ್ಲಿ ಕೆ.ಎಂ.ಮಣಿ ಹಾಗೂ ಕೆ. ಬಸು ಅವರ ಎದುರಿಸಿದ್ದಂಥ ಪರಿಸ್ಥಿತಿಯೇ ಚಾಂಡಿ ಅವರಿಗೂ ಎದುರಾಗಿದೆ ಎನ್ನುವ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.</p>.<p><strong>ಏನಿದು ಪ್ರಕರಣ?</strong>: ಪ್ರಕರಣದ ಪ್ರಮುಖ ಆರೋಪಿ ಸರಿತಾ ನಾಯರ್ ಮಾಡಿರುವ ಆರೋಪಗಳ ಕುರಿತು ಜಾಗೃತ ದಳದಿಂದ ತನಿಖೆ ನಡೆಸಬೇಕು ಎಂದು ಖಾಸಗಿ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ (ಪಿಟಿಐ): </strong>ಕೇರಳ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿರುವ ಸೋಲಾರ್ ಫಲಕ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.</p>.<p>ಹಗರಣ ಸಂಬಂಧ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಇಂಧನ ಸಚಿವ ಅರ್ಯಾಡನ್ ಮೊಹಮ್ಮದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯ ಗುರುವಾರ ಆದೇಶಿಸಿದೆ.</p>.<p>ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರು ಚಾಂಡಿ ಮತ್ತು ಸಚಿವ ಆರ್ಯಾಡನ್ ಮೊಹಮ್ಮದ್ ಅವರಿಗೆ ಲಂಚ ನೀಡಿರುವುದಾಗಿ ಆರೋಪ ಮಾಡಿದ ಒಂದು ದಿನ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>ಪಿ.ಡಿ.ಜೋಸೆಫ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜಾಗೃತ ದಳದ ವಿಶೇಷ ನ್ಯಾಯಾಲಯ ಈ ಸೂಚನೆ ನೀಡಿದೆ.</p>.<p>ಕೋರ್ಟ್ ಆದೇಶವು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರಕ್ಕೆ ತೀವ್ರ ಮುಜುಗರದ ಜತೆಗೆ ಬಿಸಿ ತುಪ್ಪವಾಗಿದೆ. ಮತ್ತೊಂದಡೆ, ಇಬ್ಬರು ಕೂಡಲೇ ಪದತ್ಯಾಗ ಮಾಡಬೇಕು ಎಂದು ಸಿಪಿಎಂ ನೇತೃತ್ವದ ಎಲ್ಡಿಎಫ್ ಒತ್ತಾಯಿಸಿದೆ.<br /> <br /> <strong>ಚಾಂಡಿ ಸವಾಲು</strong>: ಆದರೆ, ಈ ಸಂಬಂಧ ಪ್ರತಿಕ್ರಿಯಿಸಿದ ಚಾಂಡಿ ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದರು. 'ಸುಳ್ಳು ಆರೋಪಗಳ ಮೂಲಕ ತಮ್ಮನ್ನು ಮುಖ್ಯಮಂತ್ರಿ ಹುದ್ದೆಯಿಂದ ಕಿತ್ತುಹಾಕಲಾಗದು' ಎಂದರು.</p>.<p>ಅಲ್ಲದೇ, 'ಆರೋಪಗಳು ಸಾಬೀತಾದಲ್ಲಿ ಪದತ್ಯಾಗ ಮಾಡುವ ಜತೆಗೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದುವುದಾಗಿ' ಸವಾಲು ಹಾಕಿದರು.</p>.<p><strong>ರಾಜೀನಾಮೆಗೆ ಎಲ್ಡಿಎಫ್ ಪಟ್ಟು</strong>: ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿರೋಧ ಪಕ್ಷದ ನಾಯಕ ವಿ.ಎಸ್.ಅಚ್ಯುತಾನಂದನ್, ಅಧಿಕಾರದಲ್ಲಿ ಮುಂದುವರೆಯಲು ಚಾಂಡಿ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.</p>.<p>ಚಾಂಡಿ ಪದತ್ಯಾಗ ಮಾಡದಿದ್ದರೇ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಹಿಂದೆ ಬಾರ್ ಲೈಸೆನ್ಸ್ ಲಂಚ ಪ್ರಕರಣದಲ್ಲಿ ಕೆ.ಎಂ.ಮಣಿ ಹಾಗೂ ಕೆ. ಬಸು ಅವರ ಎದುರಿಸಿದ್ದಂಥ ಪರಿಸ್ಥಿತಿಯೇ ಚಾಂಡಿ ಅವರಿಗೂ ಎದುರಾಗಿದೆ ಎನ್ನುವ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.</p>.<p><strong>ಏನಿದು ಪ್ರಕರಣ?</strong>: ಪ್ರಕರಣದ ಪ್ರಮುಖ ಆರೋಪಿ ಸರಿತಾ ನಾಯರ್ ಮಾಡಿರುವ ಆರೋಪಗಳ ಕುರಿತು ಜಾಗೃತ ದಳದಿಂದ ತನಿಖೆ ನಡೆಸಬೇಕು ಎಂದು ಖಾಸಗಿ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>