ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠಾ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿ ಶನಿವಾರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ್ದ ಗಡ್ಕರಿ, ‘ಉದ್ಯೋಗಾವಕಾಶಗಳು ಇಲ್ಲದಿರುವಾಗ ಮೀಸಲಾತಿಯು ಉದ್ಯೋಗ ಭದ್ರತೆಯನ್ನು ಒದಗಿಸುವುದಿಲ್ಲ’ ‘ಮೀಸಲಾತಿ ನೀಡಲಾಗಿದೆ ಎಂದು ಊಹಿಸೋಣ. ಆದರೆ, ಉದ್ಯೋಗ ಅವಕಾಶಗಳೇ ಇಲ್ಲ. ಬ್ಯಾಂಕಿಂಗ್ ವಲಯದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯಿಂದಾಗಿ ಉದ್ಯೋಗಾವಕಾಶಗಳು ಕ್ಷೀಣಿಸಿವೆ. ಸರ್ಕಾರದ ನೇಮಕಾತಿ ಪ್ರಕ್ರಿಯೆಗಳೂ ನಿಂತಿವೆ. ಇನ್ನೆಲ್ಲಿವೆ ಕೆಲಸಗಳು? ಎಂದು ಪ್ರಶ್ನಿಸಿದ್ದರು.