<p><strong>ನವದೆಹಲಿ:</strong> ಮುಂಬರುವ ಲೋಕಸಭೆ ಚುನಾವಣೆಯ ‘ಉಪಾಂತ್ಯ’ ಎಂದೇ ಭಾವಿಸಲಾದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಗಳಿಂದ ಕಂಗೆಟ್ಟಿರುವ ಸೋನಿಯಾ–ರಾಹುಲ್ ನೇತೃತ್ವದ ಕಾಂಗ್ರೆಸ್ ನಾಯಕತ್ವ ಇದೀಗ ಕಳೆಗುಂದಿದ್ದು, ಬಹುತೇಕ ದೊಡ್ಡ ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕನಸಾಗೇ ಉಳಿಯುವಂತಾಗಿದೆ.<br /> <br /> ಲೋಕಸಭೆ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲಿ ಬಂದಿರುವ ಈ ಫಲಿತಾಂಶ ನಿಜಕ್ಕೂ ಕಾಂಗ್ರೆಸನ್ನು ಸಂಕಷ್ಟದ ಸ್ಥಿತಿಗೆ ನೂಕಿದೆ. ರಾಜಸ್ತಾನದಲ್ಲಿ ಅಧಿಕಾರ ಉಳಿಸಿಕೊಳ್ಳುವ, ಮಧ್ಯಪ್ರದೇಶ ಹಾಗೂ ಛತ್ತೀಸಗಡದಲ್ಲಿ ಅಧಿಕಾರಕ್ಕೆ ಬರುವ ದಿಸೆಯಲ್ಲಿ ನಾಯಕರು ವಹಿಸಿದ ಶ್ರಮ ವ್ಯರ್ಥವಾಗಿದ್ದು ಪಕ್ಷದ ನಾಯಕತ್ವಕ್ಕೆ ಇದು ದೊಡ್ಡ ಸವಾಲು ಎನಿಸಿದೆ.<br /> <br /> ದೊಡ್ಡ ರಾಜ್ಯ ರಾಜಸ್ತಾನದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಹಾಗಾಗಿ ಕರ್ನಾಟಕ, ಕೇರಳ ಹಾಗೂ ಅಸ್ಸಾಂನಂತಹ ದೊಡ್ಡ ರಾಜ್ಯಗಳಲ್ಲಿ ಮಾತ್ರ ಪಕ್ಷ ಈಗ ಸ್ವಂತ ಬಲದಲ್ಲಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಎನ್ಸಿಪಿ ಜತೆ, ಜಾರ್ಖಂಡ್ನಲ್ಲಿ ಜೆಎಂಎಂ–ಕಾಂಗ್ರೆಸ್ ಸರ್ಕಾರವಿದೆ. ಈ ಎಲ್ಲ ರಾಜ್ಯಗಳಿಂದ 124 ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಬಹುದಾಗಿದೆ. ಉತ್ತರಾಖಂಡ, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಈಶಾನ್ಯ ಭಾಗದ ಕೆಲ ಸಣ್ಣ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತ ಬಲದಲ್ಲಿ ಅಧಿಕಾರದಲ್ಲಿದೆ.<br /> <br /> ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳದಂತಹ ದೊಡ್ಡ ರಾಜ್ಯಗಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟಸಾಧ್ಯ ಎನ್ನಲಾಗಿದೆ. ಭ್ರಷ್ಟಾಚಾರ, ಬೆಲೆ ಏರಿಕೆ, ಆಡಳಿತ ವೈಫಲ್ಯದಂತಹ ವಿಷಯಗಳು ಕಾಂಗ್ರೆಸ್ ಪರಾಭವಕ್ಕೆ ಪ್ರಮುಖ ಕಾರಣ ಎಂದು ಸಾಮಾನ್ಯವಾಗಿ ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ಲೋಕಸಭೆ ಚುನಾವಣೆಯ ‘ಉಪಾಂತ್ಯ’ ಎಂದೇ ಭಾವಿಸಲಾದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಗಳಿಂದ ಕಂಗೆಟ್ಟಿರುವ ಸೋನಿಯಾ–ರಾಹುಲ್ ನೇತೃತ್ವದ ಕಾಂಗ್ರೆಸ್ ನಾಯಕತ್ವ ಇದೀಗ ಕಳೆಗುಂದಿದ್ದು, ಬಹುತೇಕ ದೊಡ್ಡ ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕನಸಾಗೇ ಉಳಿಯುವಂತಾಗಿದೆ.<br /> <br /> ಲೋಕಸಭೆ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲಿ ಬಂದಿರುವ ಈ ಫಲಿತಾಂಶ ನಿಜಕ್ಕೂ ಕಾಂಗ್ರೆಸನ್ನು ಸಂಕಷ್ಟದ ಸ್ಥಿತಿಗೆ ನೂಕಿದೆ. ರಾಜಸ್ತಾನದಲ್ಲಿ ಅಧಿಕಾರ ಉಳಿಸಿಕೊಳ್ಳುವ, ಮಧ್ಯಪ್ರದೇಶ ಹಾಗೂ ಛತ್ತೀಸಗಡದಲ್ಲಿ ಅಧಿಕಾರಕ್ಕೆ ಬರುವ ದಿಸೆಯಲ್ಲಿ ನಾಯಕರು ವಹಿಸಿದ ಶ್ರಮ ವ್ಯರ್ಥವಾಗಿದ್ದು ಪಕ್ಷದ ನಾಯಕತ್ವಕ್ಕೆ ಇದು ದೊಡ್ಡ ಸವಾಲು ಎನಿಸಿದೆ.<br /> <br /> ದೊಡ್ಡ ರಾಜ್ಯ ರಾಜಸ್ತಾನದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಹಾಗಾಗಿ ಕರ್ನಾಟಕ, ಕೇರಳ ಹಾಗೂ ಅಸ್ಸಾಂನಂತಹ ದೊಡ್ಡ ರಾಜ್ಯಗಳಲ್ಲಿ ಮಾತ್ರ ಪಕ್ಷ ಈಗ ಸ್ವಂತ ಬಲದಲ್ಲಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಎನ್ಸಿಪಿ ಜತೆ, ಜಾರ್ಖಂಡ್ನಲ್ಲಿ ಜೆಎಂಎಂ–ಕಾಂಗ್ರೆಸ್ ಸರ್ಕಾರವಿದೆ. ಈ ಎಲ್ಲ ರಾಜ್ಯಗಳಿಂದ 124 ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಬಹುದಾಗಿದೆ. ಉತ್ತರಾಖಂಡ, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಈಶಾನ್ಯ ಭಾಗದ ಕೆಲ ಸಣ್ಣ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತ ಬಲದಲ್ಲಿ ಅಧಿಕಾರದಲ್ಲಿದೆ.<br /> <br /> ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳದಂತಹ ದೊಡ್ಡ ರಾಜ್ಯಗಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟಸಾಧ್ಯ ಎನ್ನಲಾಗಿದೆ. ಭ್ರಷ್ಟಾಚಾರ, ಬೆಲೆ ಏರಿಕೆ, ಆಡಳಿತ ವೈಫಲ್ಯದಂತಹ ವಿಷಯಗಳು ಕಾಂಗ್ರೆಸ್ ಪರಾಭವಕ್ಕೆ ಪ್ರಮುಖ ಕಾರಣ ಎಂದು ಸಾಮಾನ್ಯವಾಗಿ ವಿಶ್ಲೇಷಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>