ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೌರಾತ್ಯ ದೃಷ್ಟಿ, ಪಾಶ್ಚಿಮಾತ್ಯ ಬಂಧ ಅಗತ್ಯ’

Last Updated 25 ಸೆಪ್ಟೆಂಬರ್ 2014, 11:27 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ‘ಭಾರತ ಪೌರಾತ್ಯ ದೃಷ್ಟಿಕೋನ ಹಾಗೂ ಪಾಶ್ಚಿಮಾತ್ಯ ಸಂಬಂಧದ ನೀತಿಯ ಬಗ್ಗೆ ಚಿಂತಿಸುವ ಅಗತ್ಯವಿದೆ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

‘ಮೇಕ್‌ ಇನ್‌ ಇಂಡಿಯಾ’ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ‘ನಾವು ಕೆಲವೊಮ್ಮೆ ಪೌರಾತ್ಯ ದೃಷ್ಟಿಕೋನದ ಬಗ್ಗೆ ಮಾತನಾಡುತ್ತೇವೆ. ಅಂತೆಯೇ ಪಾಶ್ಚಿಮಾತ್ಯ ಸಂಬಂಧದ ಬಗ್ಗೆಯೂ ಗಮನ ನೀಡಬೇಕಿದೆ’ ಎಂದಿದ್ದಾರೆ.

ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳೊಂದಿಗಿನ ವ್ಯಾಪಾರ ಸಂಬಂಧ ವೃದ್ಧಿಯ ಬಗ್ಗೆ ಭಾರತ ಉತ್ಸುಕವಾಗಿರುವ ಈ ದಿನಗಳಲ್ಲಿ ಮೋದಿ ಅವರ ಮಾತು ಮಹತ್ವ ಪಡೆದುಕೊಂಡಿದೆ. ಭಾರತದಲ್ಲಿ ಉತ್ಪಾದನಾ ಕ್ಷೇತ್ರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸುವ ನಿಟ್ಟಿನಲ್ಲಿ ‘ಮೇಕ್‌ ಇನ್‌ ಇಂಡಿಯಾ’ ಅಭಿಯಾನ ಮಹತ್ವದ್ದಾಗಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಅಮೆರಿಕಕ್ಕೆ ತೆರಳುವ ಮುನ್ನ ‘ಮೇಕ್‌ ಇನ್‌ ಇಂಡಿಯಾ’ ಅಭಿಯಾನಕ್ಕೆ ಮೋದಿ ಚಾಲನೆ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT