ಹಗರಣವನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಅಥವಾ ಸಿಬಿಐನಿಂದ ತನಿಖೆ ನಡೆಸುವ ಬಗೆಗಿನ ಅಭಿಪ್ರಾಯವನ್ನು ಕಾಯ್ದಿರಿಸಿಕೊಂಡ ನ್ಯಾಯಮೂರ್ತಿ ಎ ಕೆ ಪಟ್ನಾಯಕ್ ಅವರಿದ್ದ ಪೀಠವು, ‘ಮಂಡಳಿಯ ಸಾಂಸ್ಥಿಕ ಸ್ವಾಯತ್ತತೆಯನ್ನು ಕಾಯಬೇಕಿದ್ದು, ಹಗರಣದ ತನಿಖೆಗೆ ಬಿಸಿಸಿಐ ನೇಮಿಸುವ ಸಮಿತಿಗೆ ಪ್ರಾಶಸ್ತ್ಯ ನೀಡಲಾಗುವುದು’ ಎಂದು ಹೇಳಿತು.