ನವದೆಹಲಿ (ಪಿಟಿಐ): ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ದೆಹಲಿ ರಾಜಕಾರಣಕ್ಕೆ ಮರಳುವ ಸಾಧ್ಯತೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ತಳ್ಳಿ ಹಾಕಿದ್ದಾರೆ.
ಪಕ್ಷದ ದೆಹಲಿ ಉಸ್ತುವಾರಿಯನ್ನೂ ಹೊತ್ತಿರುವ ಗಡ್ಕರಿ ಅವರು, ‘ಯಾವುದೇ ಕಾರಣಕ್ಕೂ ಸಂಸದರು ರಾಜೀನಾಮೆ ನೀಡುವ ಸಂದರ್ಭ ಬರದಂತೆ ನೋಡಿಕೊಳ್ಳಬೇಕೆಂದು ಪಕ್ಷ ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಹರ್ಷವರ್ಧನ್ ದೆಹಲಿ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇಲ್ಲ ಎಂದರು.