ಸಂಬಂಧಿ ಉದಯ ಪೂಜಾರಿ ಅವರ ಮನೆಯ ಬಳಿ ನೆರೆಮನೆಯ ಮಕ್ಕಳ ಜೊತೆ ಶುಕ್ರವಾರ ಸಂಜೆ ಜೋಕಾಲಿ ಆಡುವಾಗ ದುರ್ಘಟನೆ ಸಂಭವಿಸಿದೆ. ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಬಾಲಕಿ ಬದುಕುಳಿಯಲಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.