<p><strong>ಬೆಂಗಳೂರು: </strong>ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದ್ದರೆ ರಾಜ್ಯಕ್ಕೆ ಉಪಕಾರವಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ಜನ ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭವಾದ ಪಕ್ಷದ ಶಾಸಕರು ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಕ್ಕೆ ಒಳಿತಾಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಬೆಳೆಸುವ ನಿಟ್ಟಿನಲ್ಲಿ ನಮ್ಮ ಗುರಿ ಇರಬೇಕು ಎಂದರು.</p>.<p>ಇದೇ ಕಾರ್ಯಕ್ರಮದಲ್ಲಿ ಮೈಸೂರಿನ ನೂತನ ಮೇಯರ್ ತಸ್ಲೀಮಾ ಅವರನ್ನು ಸನ್ಮಾನಿಸಲಾಯಿತು. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬುದು ಬಿಜೆಪಿ ಘೋಷಣೆ, ಆದರೆ ಅದನ್ನು ನಿಜಕ್ಕೂ ಜಾರಿಗೆ ತಂದಿರುವುದು ಜೆಡಿಎಸ್ ಎಂದು ಮೈಸೂರಿನ ಮೇಯರ್ ತಸ್ಲೀಮಾ ಹೇಳಿದರು.</p>.<p>ನಮ್ಮ ಸರ್ಕಾರ ಇದ್ದಾಗ ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ, ನಮ್ಮ ಪಕ್ಷ ರಚನಾತ್ಮಕವಾಗಿ ಕೆಲಸ ಮಾಡಿದೆ. ಸಾಲ ಮನ್ಬಾ ಸಹಿತ ಹಲವು ಯೋಜನೆಗಳ ಬಗ್ಗೆ ಸರಿಯಾಗಿ ಬಿಂಬಿಸುವಲ್ಲಿ ಸೋತಿದ್ದೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಹೇಳಿದರು.</p>.<p><strong>ಸಭೆಯಲ್ಲಿ ಜೆಡಿಎಸ್ ಮೂರು ನಿರ್ಣಯ</strong></p>.<p>– ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ</p>.<p>– ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಅರ್ಕಾರದ ಕಾರ್ಯವೈಖರಿ ಖಂಡನೆ</p>.<p>– ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದ್ದು, ಅದನ್ನು ಮೇಲೆತ್ತಲು ಪ್ರಯತ್ನಿಸದ ಕೇಂದ್ರ ಸರ್ಕಾರದ ಕಾರ್ಯವೈಖರಿಗೆ ಖಂಡನೆ<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದ್ದರೆ ರಾಜ್ಯಕ್ಕೆ ಉಪಕಾರವಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ಜನ ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭವಾದ ಪಕ್ಷದ ಶಾಸಕರು ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಕ್ಕೆ ಒಳಿತಾಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಬೆಳೆಸುವ ನಿಟ್ಟಿನಲ್ಲಿ ನಮ್ಮ ಗುರಿ ಇರಬೇಕು ಎಂದರು.</p>.<p>ಇದೇ ಕಾರ್ಯಕ್ರಮದಲ್ಲಿ ಮೈಸೂರಿನ ನೂತನ ಮೇಯರ್ ತಸ್ಲೀಮಾ ಅವರನ್ನು ಸನ್ಮಾನಿಸಲಾಯಿತು. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬುದು ಬಿಜೆಪಿ ಘೋಷಣೆ, ಆದರೆ ಅದನ್ನು ನಿಜಕ್ಕೂ ಜಾರಿಗೆ ತಂದಿರುವುದು ಜೆಡಿಎಸ್ ಎಂದು ಮೈಸೂರಿನ ಮೇಯರ್ ತಸ್ಲೀಮಾ ಹೇಳಿದರು.</p>.<p>ನಮ್ಮ ಸರ್ಕಾರ ಇದ್ದಾಗ ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ, ನಮ್ಮ ಪಕ್ಷ ರಚನಾತ್ಮಕವಾಗಿ ಕೆಲಸ ಮಾಡಿದೆ. ಸಾಲ ಮನ್ಬಾ ಸಹಿತ ಹಲವು ಯೋಜನೆಗಳ ಬಗ್ಗೆ ಸರಿಯಾಗಿ ಬಿಂಬಿಸುವಲ್ಲಿ ಸೋತಿದ್ದೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಹೇಳಿದರು.</p>.<p><strong>ಸಭೆಯಲ್ಲಿ ಜೆಡಿಎಸ್ ಮೂರು ನಿರ್ಣಯ</strong></p>.<p>– ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ</p>.<p>– ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಅರ್ಕಾರದ ಕಾರ್ಯವೈಖರಿ ಖಂಡನೆ</p>.<p>– ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದ್ದು, ಅದನ್ನು ಮೇಲೆತ್ತಲು ಪ್ರಯತ್ನಿಸದ ಕೇಂದ್ರ ಸರ್ಕಾರದ ಕಾರ್ಯವೈಖರಿಗೆ ಖಂಡನೆ<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>