<p><strong>ಬೆಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಕ್ಷೀಣಿಸಿದ್ದ ಮಳೆ ಕರಾವಳಿ ಭಾಗದಲ್ಲಿ ಸೋಮವಾರದಿಂದ ಮತ್ತೆ ಬಿರುಸುಗೊಂಡಿದೆ. ಬೆಳಿಗ್ಗೆ ಹೊತ್ತು ಬಿಟ್ಟು ಬಿಟ್ಟು ಸುರಿಯುತ್ತಿದ್ದ ಮಳೆ, ಮಧ್ಯಾಹ್ನದ ನಂತರ ಸತತವಾಗಿ ಸುರಿಯತೊಡಗಿದೆ. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ.<br /> <br /> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ (ಜುಲೈ 1ರವರೆಗೆ 789 ಮಿ.ಮೀ.) ಈ ಬಾರಿ ದುಪ್ಪಟ್ಟು (1417 ಮಿ.ಮೀ.) ಮಳೆ ಸುರಿದಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ.<br /> <br /> ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದ್ದು ಯಾವುದೇ ಹಾನಿ ಉಂಟಾಗಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುತ್ತಿದೆ.<br /> <br /> ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಚದುರಿದಂತೆ ಮಳೆಯಾಗಿದೆ. ಆದರೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಸುತ್ತಮುತ್ತ ರಭಸದ ಮಳೆ ಬಿದ್ದಿದೆ.<br /> <br /> ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ (ಮಲಪ್ರಭಾ ನದಿಯ ಉಗಮ ಸ್ಥಾನ) ಪ್ರದೇಶದಲ್ಲಿ 102 ಮಿ.ಮೀ. ಮಳೆ ದಾಖಲಾಗಿದೆ. ಖಾನಾಪುರ ಪಟ್ಟಣದ ಸಮೀಪದ ಹಳೆ ಸೇತುವೆ ಮುಳುಗಡೆಯಾಗಿದೆ.<br /> <br /> ಆಲಮಟ್ಟಿ ಜಲಾಶಯದ ಒಳಹರಿವು ಸ್ವಲ್ಪ ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಕ್ಷೀಣಿಸಿದ್ದ ಮಳೆ ಕರಾವಳಿ ಭಾಗದಲ್ಲಿ ಸೋಮವಾರದಿಂದ ಮತ್ತೆ ಬಿರುಸುಗೊಂಡಿದೆ. ಬೆಳಿಗ್ಗೆ ಹೊತ್ತು ಬಿಟ್ಟು ಬಿಟ್ಟು ಸುರಿಯುತ್ತಿದ್ದ ಮಳೆ, ಮಧ್ಯಾಹ್ನದ ನಂತರ ಸತತವಾಗಿ ಸುರಿಯತೊಡಗಿದೆ. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ.<br /> <br /> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ (ಜುಲೈ 1ರವರೆಗೆ 789 ಮಿ.ಮೀ.) ಈ ಬಾರಿ ದುಪ್ಪಟ್ಟು (1417 ಮಿ.ಮೀ.) ಮಳೆ ಸುರಿದಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ.<br /> <br /> ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದ್ದು ಯಾವುದೇ ಹಾನಿ ಉಂಟಾಗಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುತ್ತಿದೆ.<br /> <br /> ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಚದುರಿದಂತೆ ಮಳೆಯಾಗಿದೆ. ಆದರೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಸುತ್ತಮುತ್ತ ರಭಸದ ಮಳೆ ಬಿದ್ದಿದೆ.<br /> <br /> ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ (ಮಲಪ್ರಭಾ ನದಿಯ ಉಗಮ ಸ್ಥಾನ) ಪ್ರದೇಶದಲ್ಲಿ 102 ಮಿ.ಮೀ. ಮಳೆ ದಾಖಲಾಗಿದೆ. ಖಾನಾಪುರ ಪಟ್ಟಣದ ಸಮೀಪದ ಹಳೆ ಸೇತುವೆ ಮುಳುಗಡೆಯಾಗಿದೆ.<br /> <br /> ಆಲಮಟ್ಟಿ ಜಲಾಶಯದ ಒಳಹರಿವು ಸ್ವಲ್ಪ ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>