<p><strong>ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ):</strong> ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ಮೃತಪಟ್ಟ ಯಾದಗಿರಿ ಜಿಲ್ಲೆಯ ಸುರಪುರದ 22 ಮಂದಿ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಇಲಾಖೆಯಿಂದ ಪರಿಹಾರ ನೀಡುವುದಾಗಿ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಘೋಷಿಸಿದರು.<br /> <br /> ‘ಮೃತಪಟ್ಟವರಲ್ಲಿ ನೋಂದಾಯಿತ ಕಾರ್ಮಿಕರಿದ್ದರೆ ಅವರ ಕುಟುಂಬಕ್ಕೆ ತಲಾ ₨ 2 ಲಕ್ಷ ಹಾಗೂ ನೋಂದಣಿ ಮಾಡಿಸದ ಕಾರ್ಮಿಕರಾಗಿದ್ದರೆ ತಲಾ ರೂ 50,000 ಪರಿಹಾರ ನೀಡಲಾಗುವುದು’ ಎಂದು ನಾಯ್ಕ ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ಈಗಾಗಲೇ ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ಸರ್ಕಾರದ ಪರವಾಗಿ ₨ 1 ಲಕ್ಷ ಪರಿಹಾರ ಘೋಷಿಸಿದ್ದಾರೆ. ಆದರೆ ಪರಿಹಾರವನ್ನು ಹೆಚ್ಚಿಸಬೇಕೆಂಬ ಮನವಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಇಲಾಖೆಯಿಂದಲೂ ಹೆಚ್ಚುವರಿಯಾಗಿ ಪರಿಹಾರ ನೀಡಲು ಚಿಂತನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ):</strong> ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ಮೃತಪಟ್ಟ ಯಾದಗಿರಿ ಜಿಲ್ಲೆಯ ಸುರಪುರದ 22 ಮಂದಿ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಇಲಾಖೆಯಿಂದ ಪರಿಹಾರ ನೀಡುವುದಾಗಿ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಘೋಷಿಸಿದರು.<br /> <br /> ‘ಮೃತಪಟ್ಟವರಲ್ಲಿ ನೋಂದಾಯಿತ ಕಾರ್ಮಿಕರಿದ್ದರೆ ಅವರ ಕುಟುಂಬಕ್ಕೆ ತಲಾ ₨ 2 ಲಕ್ಷ ಹಾಗೂ ನೋಂದಣಿ ಮಾಡಿಸದ ಕಾರ್ಮಿಕರಾಗಿದ್ದರೆ ತಲಾ ರೂ 50,000 ಪರಿಹಾರ ನೀಡಲಾಗುವುದು’ ಎಂದು ನಾಯ್ಕ ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ಈಗಾಗಲೇ ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ಸರ್ಕಾರದ ಪರವಾಗಿ ₨ 1 ಲಕ್ಷ ಪರಿಹಾರ ಘೋಷಿಸಿದ್ದಾರೆ. ಆದರೆ ಪರಿಹಾರವನ್ನು ಹೆಚ್ಚಿಸಬೇಕೆಂಬ ಮನವಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಇಲಾಖೆಯಿಂದಲೂ ಹೆಚ್ಚುವರಿಯಾಗಿ ಪರಿಹಾರ ನೀಡಲು ಚಿಂತನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>